ಶಿವಮೊಗ್ಗ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದು ನಾಡಿನ ಸಮಸ್ತ ಜನರ ಸುಭಿಕ್ಷೆ ಹಾಗೂ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದ್ದಾರೆ.
ಈ ವೇಳೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ, ಶ್ರೀ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಇತರ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಇಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿಂದು ‘ಕಸ್ತೂರಿ ರಂಗನ್ ವರದಿ’ ವಿಚಾರವಾಗಿ ಸಾರ್ವಜನಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದ್ದಾರೆ.
ಈ ಸಂವಾದ ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಅರಗ ಜ್ಞಾನೇಂದ್ರ, ಮತಿ ಶಾರದಾ ಪೂರ್ಯನಾಯ್ಕ್, ಎಸ್.ಎನ್. ಚನ್ನಬಸಪ್ಪ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರದ ಅಧ್ಯಕ್ಷರಾದ ಅಂಶುಮನ್, ಸೂಡಾ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
https://twitter.com/DKShivakumar/status/2101251452647948687?s=20