ಉಡುಪಿ : ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸಂವಾದದ ಪ್ರಮುಖಾಂಶಗಳು.
ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಭಾವನೆ ತಿಳಿದು ಪರಿಹಾರ ನೀಡಲು ಬಂದಿದ್ದು, ನಿಮ್ಮ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಲಿದೆ; ಸೆಪ್ಟೆಂಬರ್ 27ರ ಒಳಗೆ ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗಿದೆ.
3 ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದ್ದು, ರೈತರು, ಬರಗಾಲ ಹಾಗೂ ಕಸ್ತೂರಿ ರಂಗನ್ ವಿಚಾರವಾಗಿ ಚರ್ಚೆ ಮಾಡಲಾಗುವುದು. ಸೋಮವಾರ ಮೊದಲ ದಿನವೇ ಕಸ್ತೂರಿ ರಂಗನ್ ವರದಿ ವಿಚಾರ ಚರ್ಚೆ ಮಾಡಲಾಗುವುದು.
ರಾಜ್ಯ ಸರ್ಕಾರವೇ ತಜ್ಞರ ಸಮಿತಿ ರಚಿಸಿ ಭೌತಿಕ ಸಮೀಕ್ಷೆ ನಡೆಸಿ, ಆ ವರದಿಯನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಹಾಗೂ ಹಸಿರು ನ್ಯಾಯಪೀಠಕ್ಕೆ ಸಲ್ಲಿಸಿ ಮನವರಿಕೆ ಮಾಡಿಕೊಡಬೇಕು ಎಂಬ ಬೇಡಿಕೆಗೆ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ಅರಣ್ಯ ಹಕ್ಕು ಕಾಯ್ದೆಯಲ್ಲಿ ಕೆಲವರಿಗೆ 25 ವರ್ಷ ಹಾಗೂ ಉಳಿದವರಿಗೆ 75 ವರ್ಷವಿರುವ ನಿಯಮ ಬದಲಿಸಿ, ಎಲ್ಲರಿಗೂ 25 ವರ್ಷಗಳ ಮಿತಿ ನಿಗದಿ ಮಾಡಲು ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲಾಗುವುದು; ಅರಣ್ಯವಾಸಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಗರ್ ಹುಕುಂ ಸಾಗುವಳಿ ಹಾಗೂ ಉಳುವವನಿಗೆ ಭೂಮಿ ನೀಡಿರುವುದು ನಮ್ಮ ಸರ್ಕಾರ.
https://twitter.com/CMofKarnataka/status/2101261249459957849?s=20