LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ : ಸಿಎಂ ಡಿ.ಕೆ. ಶಿವಕುಮಾರ್

ಉಡುಪಿ : ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್  ಅವರು ನಡೆಸಿದ ಸಂವಾದದ ಪ್ರಮುಖಾಂಶಗಳು.

ಕಸ್ತೂರಿ ರಂಗನ್‌ ವರದಿ ವಿಚಾರದಲ್ಲಿ ಜನರ ಭಾವನೆ ತಿಳಿದು ಪರಿಹಾರ ನೀಡಲು ಬಂದಿದ್ದು, ನಿಮ್ಮ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಲಿದೆ; ಸೆಪ್ಟೆಂಬರ್‌ 27ರ ಒಳಗೆ ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗಿದೆ.

3 ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದ್ದು, ರೈತರು, ಬರಗಾಲ ಹಾಗೂ ಕಸ್ತೂರಿ ರಂಗನ್‌ ವಿಚಾರವಾಗಿ ಚರ್ಚೆ ಮಾಡಲಾಗುವುದು. ಸೋಮವಾರ ಮೊದಲ ದಿನವೇ ಕಸ್ತೂರಿ ರಂಗನ್‌ ವರದಿ ವಿಚಾರ ಚರ್ಚೆ ಮಾಡಲಾಗುವುದು.

ರಾಜ್ಯ ಸರ್ಕಾರವೇ ತಜ್ಞರ ಸಮಿತಿ ರಚಿಸಿ ಭೌತಿಕ ಸಮೀಕ್ಷೆ ನಡೆಸಿ, ಆ ವರದಿಯನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ ಹಾಗೂ ಹಸಿರು ನ್ಯಾಯಪೀಠಕ್ಕೆ ಸಲ್ಲಿಸಿ ಮನವರಿಕೆ ಮಾಡಿಕೊಡಬೇಕು ಎಂಬ ಬೇಡಿಕೆಗೆ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

ಅರಣ್ಯ ಹಕ್ಕು ಕಾಯ್ದೆಯಲ್ಲಿ ಕೆಲವರಿಗೆ 25 ವರ್ಷ ಹಾಗೂ ಉಳಿದವರಿಗೆ 75 ವರ್ಷವಿರುವ ನಿಯಮ ಬದಲಿಸಿ, ಎಲ್ಲರಿಗೂ 25 ವರ್ಷಗಳ ಮಿತಿ ನಿಗದಿ ಮಾಡಲು ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲಾಗುವುದು; ಅರಣ್ಯವಾಸಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಗರ್‌ ಹುಕುಂ ಸಾಗುವಳಿ ಹಾಗೂ ಉಳುವವನಿಗೆ ಭೂಮಿ ನೀಡಿರುವುದು ನಮ್ಮ ಸರ್ಕಾರ.

https://twitter.com/CMofKarnataka/status/2101261249459957849?s=20

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ.!ಭಾರತದಲ್ಲಿನ ಕಾರುಗಳ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳು ಏನು ಅರ್ಥವನ್ನು ಸೂಚಿಸುತ್ತದೆ?ಮೊಟ್ಟೆ ಸಸ್ಯಾಹಾರವೋ – ಮಾಂಸಾಹಾರವೋ ? ಇಲ್ಲಿದೆ ದಶಕಗಳ ಗೊಂದಲಕ್ಕೆ ವಿಜ್ಞಾನ ನೀಡುವ ಸ್ಪಷ್ಟ ಉತ್ತರ !ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ : ಸಿಎಂ ಡಿ.ಕೆ. ಶಿವಕುಮಾರ್ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್.!ಪಾಕಿಸ್ತಾನದಲ್ಲಿ ಇಂಧನ ದರ ಏರಿಕೆ ಖಂಡಿಸಿ ವಿಧಾನಸಭೆಗೆ ಕತ್ತೆಯಲ್ಲಿ ಆಗಮಿಸಿದ ಶಾಸಕರುಒಂದೇ ದಿನ ಕೋಟಿ ರೂ. ಮೌಲ್ಯದ 36 ಐಫೋನ್ ಖರೀದಿ ; ಯುವಕರಿಬ್ಬರ ಕಾರ್ಯಕ್ಕೆ ನೆಟ್ಟಿಗರ ಬೆರಗು !ರೆಜಿನಗರದಲ್ಲೂ ಮಮತಾ ಬಣಕ್ಕೆ ಹಿನ್ನಡೆ: ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ನಾಮಪತ್ರ ವಾಪಸ್; ನಂದಿಗ್ರಾಮ್ ಬೆಳವಣಿಗೆ ಬೆನ್ನಲ್ಲೇ ಮತ್ತೊಂದು ಆಘಾತಹವಾಮಾನ ವೈಪರೀತ್ಯ: ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲಿನ ತಪ್ಪಾದ ಆರೋಪ ಖಂಡಿಸಿದ ಪ್ರಧಾನಿ ಮೋದಿನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್