LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಸ್ತೂರಿ ರಂಗನ್ ವರದಿ ಜಾರಿಗೆ ಒಪ್ಪಲ್ಲ, ಮಲೆನಾಡಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ; ಜನರ ಪರವಾಗಿ ನಿಂತು ಅವರ ಹಿತರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಿಎಂ ಡಿ.ಕೆ ಶಿವಕುಮಾರ್ ಅವರ ಸಾರ್ವಜನಿಕರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 

ಕಸ್ತೂರಿ ರಂಗನ್ ವರದಿಗೆ ಧಿಕ್ಕಾರ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಕಸ್ತೂರಿ ರಂಗನ್ ವರದಿಯಿಂದಾಗಿ ಮಲೆನಾಡು ಭಾಗದ ಜನರು ತೀವ್ರ ಆತಂಕದಲ್ಲಿದ್ದಾರೆ. ಹಿಂದೆ ಕಾವೇರಿ ನೀರಿನ ವಿಚಾರ ಬಂದಾಗ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿಶೇಷ ಅಧಿವೇಶನ ಕರೆದು ದಿಟ್ಟ ನಿಲುವು ತೆಗೆದುಕೊಂಡಿದ್ದನ್ನು ಸ್ಮರಿಸಿದ ಅವರು, ಅದೇ ಹಾದಿಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ಸಂಪೂರ್ಣವಾಗಿ ಧಿಕ್ಕರಿಸಲಿದೆ ಎಂದರು.

ಈ ಸಮಸ್ಯೆಯನ್ನು ಕೇವಲ ಸಭಾಂಗಣದಲ್ಲಿ ಚರ್ಚಿಸದೆ ಜನರ ಮನೆಬಾಗಿಲಿಗೆ ಬಂದು ಆಲಿಸುತ್ತಿರುವ ಸರ್ಕಾರದ ನಡೆ ಶ್ಲಾಘನೀಯ ಎಂದು ಹೇಳಿದರು.

ಅರಣ್ಯವಾಸಿಗಳು ಹಾಗೂ ಅಡಿಕೆ ಬೆಳೆಗಾರರ ರಕ್ಷಣೆ

ಮಲೆನಾಡಿನಲ್ಲಿ ಪರಿಸರ ಉಳಿದಿರುವುದೇ ರೈತರಿಂದ, ಹೀಗಾಗಿ ಅರಣ್ಯವಾಸಿಗಳಿಗೆ ತೊಂದರೆ ನೀಡುವ ನೀತಿಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.

1990ರಲ್ಲಿ ಬಂಗಾರಪ್ಪನವರ ಸರ್ಕಾರ ಉಚಿತ ವಿದ್ಯುತ್ ನೀಡಿದ ಬಳಿಕ ಜಿಲ್ಲೆಯಲ್ಲಿ ಅಡಿಕೆ ಬೆಳೆ ಗಣನೀಯವಾಗಿ ವಿಸ್ತರಿಸಿದ್ದು, ಇಂದು ಸುಮಾರು 1.48 ಲಕ್ಷ ರೈತರು ಅಡಿಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ಜಿಲ್ಲೆ ಇದಾಗಿದ್ದು, ಕೇಂದ್ರ ಸರ್ಕಾರ ಇಲ್ಲಿನ ಜನರ ವಾಸ್ತವ ಸಂಕಷ್ಟವನ್ನು ಅರ್ಥಮಾಡಿಕೊಂಡು ಸೂಕ್ತ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಭೂಕುಸಿತ ಸಂತ್ರಸ್ತರಿಗೆ ನಿವೇಶನ ಮತ್ತು ನೆರವು

ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಶೀಘ್ರವೇ ನಿವೇಶನ ಒದಗಿಸಲು ಜಿಲ್ಲಾಡಳಿತದ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಲ್ಲದೆ, ಪಕ್ಷಾತೀತವಾಗಿ ಮುಖಂಡರೆಲ್ಲರೂ ಸಂತ್ರಸ್ತರಿಗೆ ವೈಯಕ್ತಿಕವಾಗಿಯೂ ಬೆಂಬಲವಾಗಿ ನಿಲ್ಲಲಿದ್ದಾರೆ ಎಂದು ತಿಳಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಗೆ ಕೃತಜ್ಞತೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಮಲೆನಾಡು ಭಾಗದ ಜನರ ಸಂಕಷ್ಟಗಳನ್ನು ಆಲಿಸಲು ನೇರವಾಗಿ ಆಗಮಿಸಿರುವುದಕ್ಕೆ ಸಚಿವರು ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನಸಾಮಾನ್ಯರ ಜೊತೆ ನಿಂತು ಕೆಲಸ ಮಾಡಲು ಈ ನಡೆ ಸ್ಫೂರ್ತಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. 

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲೆನಾಡಿನ ಜನರ ಸಂಕಷ್ಟಕ್ಕೆ ಸ್ಪಂದಿಸಿ, ಶರಾವತಿ ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸಿ: ಸಿಎಂಗೆ ಬಿ.ಆರ್ ಜಯಂತ್ ಮನವಿಕಸ್ತೂರಿರಂಗನ್ ವರದಿ ರದ್ದು, ಅಡಿಕೆ ಬೆಳೆಗಾರರ ರಕ್ಷಣೆಗೆ ಶಾಸಕ ಅರಗ ಜ್ಞಾನೇಂದ್ರ ಆಗ್ರಹದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಅವರ ಪತ್ನಿ, ಪುತ್ರ, ಪೋಷಕರಿಗೆ ‘ಅನ್ ಮ್ಯಾಪ್ಡ್’ ವರ್ಗದಡಿ SIR ನೋಟಿಸ್ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕಕಸ್ತೂರಿ ರಂಗನ್ ವರದಿ ಜಾರಿಗೆ ಒಪ್ಪಲ್ಲ, ಮಲೆನಾಡಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ.ಕೆ.ಶಿವಕುಮಾರ್ ಭರವಸೆಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕಹಿ ನೆನಪು ಮರೆತು ಸಂಭ್ರಮದಲ್ಲಿ ಒಂದಾದ ಹಿಂದೂ-ಮುಸ್ಲಿಂ ಬಾಂಧವರುಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆತಮ್ಮ ಎರಡನೇ ಮಗು ಸ್ವಾಗತಿಸಿದ ದೀಪಿಕಾ ಪಡುಕೋಣೆ – ರಣವೀರ್ ಸಿಂಗ್18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ.!