LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.

ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ನಗರದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪ್ರಾರಂಭವಾಗಲಿದ್ದು, ಕಾಮಗಾರಿ ಮುಗಿದ ಬಳಿಕ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಹಾಗೂ ವೃತ್ತಕ್ಕೆ ಹೆಸರಿಡಲು ಈಗಾಗಲೇ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಇತ್ತಿಚೆಗೆ ಸಹಕಾರ ಸಂಘಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಆದರೆ, ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಅಂತಹ ಯಾವುದೇ ಲೋಪಗಳು ಕಂಡು ಬಂದಿಲ್ಲ. ಹೀಗಾಗಿ ಸದಸ್ಯರು ಹಾಗೂ ನಿರ್ದೆಶಕರು ಮುನ್ನೆಚ್ಚರಿಕೆ ಕ್ರಮವಾಗಿ ಲೆಕ್ಕ ಪತ್ರಗಳನ್ನು ಆಗಾಗ್ಗೆ ಗಮನಿಸುತಿರಬೇಕೆಂದು ಸಲಹೆ ನೀಡಿದರು.

ತಾಲೂಕಿನಲ್ಲಿ 22 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತ ಸಮುದಾಯವಿದೆ. ಅದರಲ್ಲಿ ಆರ್ಥಿಕವಾಗಿ ಹಿಂದುಳಿದ ವಸತಿ ವಂಚಿತರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು. ಹಾಗೂ ನಗರ ವ್ಯಾಪ್ತಿಯಲ್ಲಿರುವ ಸ್ಮಶಾನವು ಸಾಕಷ್ಟು ಅಧ್ವಾನಗೊಂಡಿದ್ದು, ಇನ್ನು ಮೂರು ತಿಂಗಳಲ್ಲಿ ಸ್ಮಶಾನ ಮತ್ತು ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಇನ್ನು ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿಗಳಾದ ಶಿವಸಿದ್ಧೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಇದೇ ವೇಳೆ ವೈದ್ಯನಾಥಪುರದ ಜಂಗಮ‌ ಮಠದ ಶ್ರೀ ರೇಣುಕಾ ಶಿವಾಚಾರ್ಯಸ್ವಾಮಿಜಿ, ಮಡೇನಹಳ್ಳಿಯ ತೋಂಟದಾರ್ಯ ಮಠದ ಅರುಣಾಚಲ ಸ್ವಾಮೀಜಿ, ಎಸ್.ಐ.ಹೊನ್ನಲಗೆರೆ ಶಿವ ಕ್ಷೇತ್ರ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಂಘದ ಅಧ್ಯಕ್ಷ ಪಿ‌‌.ರಾಜಶೇಖರ್, ಎಸ್‌.ವ್ಯಾಸ ವಿಶ್ವ ವಿದ್ಯಾಲಯ ಕುಲಾಧಿಪತಿ ಡಾ.ಹೆಚ್.ಆರ್‌.ದಯಾನಂದ್ ಸ್ವಾಮಿ, ಕೆ.ಹೆಚ್.ವೀರಭದ್ರಪ್ಪ, ಉಮಾಪತಿ, ಹೆಚ್.ಆರ್.ನಾಗಭೂಷಣ್ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.24ರಂದು ಸಿಎಂ ಡಿಕೆ ಶಿವಕುಮಾರ್ ಗಂಗಾಪೂಜೆ: ಚಿತ್ರದುರ್ಗದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ, ಟಿ.ರಘುಮೂರ್ತಿBIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'BIG BREAKING: ಬೆಂಗಳೂರಲ್ಲಿ 'ನಕಲಿ ಔಷಧಿ ಜಾಲ'ಕ್ಕೆ 'FDA ಸರ್ಜಿಕಲ್ ಸ್ಟ್ರೈಕ್': 16 ಫಾರ್ಮಸಿ ಲೈಸೆನ್ಸ್ ರದ್ದು!ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿSHOCKING: ಮದುವೆ ಆಗಲು ಹುಡುಗಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆBREAKING: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್, ಆರೋಪಿ ಪರಾರಿರೈತರ ಹಿತರಕ್ಷಣೆಗೆ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂ