LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್

ಮಂಡ್ಯ :  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾ ಸೇವೆ ಆಂದೋಲನದಲ್ಲಿ ಸಾರ್ವಜನಿಕರು ನೀಡುವ ದೂರು ಮತ್ತು ಸರ್ಕಾರದ ಸವಲತ್ತುಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕೆಂದು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಸೂಚನೆ ನೀಡಿದರು.

ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಆದೇಶದಂತೆ ಪ್ರತಿ ತಾಲ್ಲೂಕು, ಹೋಬಳಿ ಸೇರಿದಂತೆ ಎಲ್ಲಾ ಗ್ರಾ.ಪಂ ವ್ಯಾಪ್ತಿಗಳಲ್ಲಿ ಪ್ರತಿ ಶನಿವಾರ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ನಡೆಸಲಾಗುವುದು. ಇದು ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಸರ್ಕಾರದ ಹೊಸ ಯೋಜನೆಯಾಗಿದೆ. ಸಾರ್ವಜನಿಕರು ನೀಡುವ ದೂರುಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ತಾಪಂ ಇಓ ರಾಮಲಿಂಗಯ್ಯ ಮಾತನಾಡಿ, ರಾಜ್ಯ ಸರ್ಕಾರವು ನೂತನವಾಗಿ ಸ್ಥಾಪಿಸಿರುವ ಪ್ರಜಾಸೇವಾ ಇಲಾಖೆಯ ವತಿಯಿಂದ ಹೋಬಳಿವಾರು ಪ್ರಜಾಸೇವಾ ಅಭಿಯಾನ ಏರ್ಪಡಿಸಿ ಜನಸಾಮಾನ್ಯರಿಂದ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಕೆಲವು ಅರ್ಜಿಗಳಿಗೆ ಪರಿಹಾರ ನೀಡಲಾಗುತ್ತಿದೆ ಹೀಗಾಗಿ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು‌.

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ನಿಡಘಟ್ಟ ಗ್ರಾ.ಪಂ ಮಾಜಿ ಅಧ್ಯಕ್ಷ ಎನ್.ಆರ್.ಪ್ರಕಾಶ್ ಮಾತನಾಡಿ ಗ್ರಾಮಕ್ಕೆ ಹಿಂದಿನಿಂದಲೂ ಸಾರ್ವಜನಿಕ ಸ್ಮಶಾನ ಇಲ್ಲದೇ ಜನರಿಗೆ ತೊಂದರೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಹಾಗೂ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆಗೊಳಿಸಬೇಕೆಂದು ಎಂದು ಆಗ್ರಹಿಸಿ ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ರವರಿಗೆ ಅಹವಾಲು ಸಲ್ಲಿಸಿದರು.

ಇನ್ನು ಕಾರ್ಯಕ್ರಮದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ, ಸೆಸ್ಕಾಂ, ಆಹಾರ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳಗಳಿಂದ 190 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಕಾರ್ಯಕ್ರಮದಲ್ಲಿ ಬಿಇಓ ಧನಂಜಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪರಮೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಶಂಕರ್, ನೀವು ಇಲಾಖೆ ಸಹಾಯಕ ನಿರ್ದೇಶಕ ಡಾ.ಗೋವಿಂದ್, ಚೆಸ್ಕಾಂ ಇಇ ಶಿವಕುಮಾರ್, ಎಡಿಎಲ್ಆರ್ ಲಿಖಿತ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.24ರಂದು ಸಿಎಂ ಡಿಕೆ ಶಿವಕುಮಾರ್ ಗಂಗಾಪೂಜೆ: ಚಿತ್ರದುರ್ಗದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ, ಟಿ.ರಘುಮೂರ್ತಿBIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'BIG BREAKING: ಬೆಂಗಳೂರಲ್ಲಿ 'ನಕಲಿ ಔಷಧಿ ಜಾಲ'ಕ್ಕೆ 'FDA ಸರ್ಜಿಕಲ್ ಸ್ಟ್ರೈಕ್': 16 ಫಾರ್ಮಸಿ ಲೈಸೆನ್ಸ್ ರದ್ದು!ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿSHOCKING: ಮದುವೆ ಆಗಲು ಹುಡುಗಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆBREAKING: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್, ಆರೋಪಿ ಪರಾರಿರೈತರ ಹಿತರಕ್ಷಣೆಗೆ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂ