LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆ

ಮಂಡ್ಯ: ಕಳೆದ ವರ್ಷ ಕೋಮು ಸಂಘರ್ಷಕ್ಕೆ ಸಾಕ್ಷಿಯಾಗಿದ್ದ ಮದ್ದೂರು ಪಟ್ಟಣದಲ್ಲಿ ಈ ಬಾರಿ ಅಪರೂಪದ ಸಾಮರಸ್ಯ ಹಾಗೂ ಭಾವೈಕ್ಯತೆಯ ಗಣೇಶೋತ್ಸವ ಕಣ್ಮನ ಸೆಳೆದಿದೆ. ಸ್ಥಳೀಯ ಶಾಸಕ ಕದಲೂರು ಉದಯ್ ಅವರ ನೇತೃತ್ವದಲ್ಲಿ ನಡೆದ ಅದ್ದೂರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಮುಂಚೂಣಿಯಲ್ಲಿ ನಿಂತು, ಹಿಂದೂ-ಮುಸ್ಲಿಂ ಬಾಂಧವ್ಯದ ಹೊಸ ಸಂದೇಶ ಸಾರಿದ್ದಾರೆ.

ಕೇಸರಿ ಶಾಲು ಧರಿಸಿ ಸ್ವಾಗತ, ಗಣೇಶನಿಗೆ ಬೃಹತ್ ಹಾರ ಸಮರ್ಪಣೆ

ಮದ್ದೂರು ಪಟ್ಟಣದ ಪೇಟೆ ಬೀದಿಯಲ್ಲಿರುವ ಹಜರತ್ ದೌಡ್ ತೆ ಪೀರ್ ಬಾಬಾ ದರ್ಗಾ ಹಾಗೂ ಮಸೀದಿ ಮುಂಭಾಗದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಯುವಕರು ಸ್ವತಃ ಕೇಸರಿ ಶಾಲು ಧರಿಸಿ ಗಣೇಶ ಶೋಭಾಯಾತ್ರೆಗೆ ಆತ್ಮೀಯ ಸ್ವಾಗತ ಕೋರಿದರು. ಮಸೀದಿ ಮುಂದೆ ಗಣಪತಿಗೆ ಬೃಹತ್ ಹೂವಿನ ಹಾರ ಹಾಕಿ ವಿಶೇಷ ಪೂಜೆ ಸಲ್ಲಿಸಿದ ದೃಶ್ಯ ಸೌಹಾರ್ದತೆಯ ಪ್ರತೀಕವಾಗಿತ್ತು. ಇದೇ ವೇಳೆ ಶಾಸಕ ಕದಲೂರು ಉದಯ್ ಅವರಿಗೂ ಹಾರ ಹಾಕಿ ಅಭಿನಂದಿಸಿದರು.

ಗಣಪತಿ ಮೆರವಣಿಗೆಗೆ ಮುಸ್ಲಿಮರೇ ಸಾರಥಿ: ಒಟ್ಟಿಗೆ ಕುಣಿದು ಸಂಭ್ರಮ

ಗಣೇಶ ಮೂರ್ತಿಯನ್ನು ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಮುಸ್ಲಿಂ ಯುವಕನೇ ಚಾಲಕನಾಗಿ (ಸಾರಥಿ) ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದರು. ವಿಸರ್ಜನಾ ಮೆರವಣಿಗೆಯುದ್ದಕ್ಕೂ ಹಿಂದೂ ಯುವಕರ ಜೊತೆ ಹೆಗಲಿಗೆ ಹೆಗಲು ಕೊಟ್ಟು ಹೆಜ್ಜೆ ಹಾಕಿದ ಮುಸ್ಲಿಂ ಬಾಂಧವರು, ಗಣಪತಿಗೆ ಜೈಕಾರ ಕೂಗಿ ಒಟ್ಟಿಗೆ ಹೆಜ್ಜೆ ಹಾಕಿ ನೃತ್ಯ ಮಾಡಿದರು. ದರ್ಗಾದ ಮುಂದೆ ಸಾಲುಗಟ್ಟಿ ನಿಂತಿದ್ದ ನೂರಾರು ಮುಸ್ಲಿಮರು ಮೆರವಣಿಗೆಯಲ್ಲಿದ್ದ ಭಕ್ತರಿಗೆ ಕುಡಿಯುವ ನೀರು, ನಂದಿನಿ ಮಜ್ಜಿಗೆ ಪ್ಯಾಕೆಟ್‌ಗಳು ಹಾಗೂ ಜ್ಯೂಸ್ ವಿತರಿಸಿ ಉಪಚರಿಸಿದರು.

ಕೋಮು ವಿಷಬೀಜ ಬಿತ್ತುವವರಿಗೆ ತಕ್ಕ ಉತ್ತರ: ಶಾಸಕ ಕದಲೂರು ಉದಯ್

ಕಾರ್ಯಕ್ರಮದ ಬಳಿಕ ಮಾತನಾಡಿದ ಮದ್ದೂರು ಶಾಸಕ ಕದಲೂರು ಉದಯ್, "ಮದ್ದೂರಿನಲ್ಲಿ ಇಂದು ಸರ್ವಧರ್ಮೀಯರೂ ಒಗ್ಗೂಡಿ ಸಾಮರಸ್ಯದ ಗಣೇಶೋತ್ಸವವನ್ನು ಅತ್ಯಂತ ಭಕ್ತಿ-ಭಾವದಿಂದ ಆಚರಿಸಿದ್ದಾರೆ. ಕಳೆದ ಬಾರಿ ನಡೆದ ಅಹಿತಕರ ಘಟನೆಗಳನ್ನು ಮುಂದಿಟ್ಟುಕೊಂಡು ಕೋಮು ಗಲಭೆ ಸೃಷ್ಟಿಸಿ, ರಾಜಕೀಯ ಬಣ್ಣ ಬಳಿದು ಲಾಭ ಪಡೆಯಲು ಯತ್ನಿಸಿದವರಿಗೆ ಮದ್ದೂರಿನ ಜನತೆ ತಕ್ಕ ಉತ್ತರ ನೀಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿ ವಿಷಬೀಜ ಬಿತ್ತುವ ಬಿಜೆಪಿಯ ರಾಜಕೀಯ ಲೆಕ್ಕಾಚಾರ ಇಲ್ಲಿ ಯಶಸ್ವಿಯಾಗಿಲ್ಲ. ಇಡೀ ಪಟ್ಟಣದ ಜನರು ಶಾಂತಿ ಮತ್ತು ಸಹಬಾಳ್ವೆಗೆ ಸಾಕ್ಷಿಯಾಗಿದ್ದಾರೆ" ಎಂದು ತಿಳಿಸಿದರು.

ವರದಿ: ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.24ರಂದು ಸಿಎಂ ಡಿಕೆ ಶಿವಕುಮಾರ್ ಗಂಗಾಪೂಜೆ: ಚಿತ್ರದುರ್ಗದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ, ಟಿ.ರಘುಮೂರ್ತಿBIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'BIG BREAKING: ಬೆಂಗಳೂರಲ್ಲಿ 'ನಕಲಿ ಔಷಧಿ ಜಾಲ'ಕ್ಕೆ 'FDA ಸರ್ಜಿಕಲ್ ಸ್ಟ್ರೈಕ್': 16 ಫಾರ್ಮಸಿ ಲೈಸೆನ್ಸ್ ರದ್ದು!ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿSHOCKING: ಮದುವೆ ಆಗಲು ಹುಡುಗಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆBREAKING: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್, ಆರೋಪಿ ಪರಾರಿರೈತರ ಹಿತರಕ್ಷಣೆಗೆ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂ