LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘PM KISAN’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಜೂನ್ 20ರಂದು ಖಾತೆಗೆ ₹2,000 ಜಮೆ, e-KYC ಕಡ್ಡಾಯ!

ದೇಶಾದ್ಯಂತ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಿಎಂ-ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ 23ನೇ ಕಂತಿನ ಹಣ ಬಿಡುಗಡೆ ದಿನಾಂಕವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಬರುವ ಜೂನ್ 20ರಂದು ದೇಶದಾದ್ಯಂತ ಸುಮಾರು 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ₹2,000 ಜಮೆಯಾಗಲಿದೆ. ಆದರೆ ಈ ಹಣ ಪಡೆಯಲು ರೈತರು ಒಂದು ಪ್ರಮುಖ ಕಾರ್ಯವನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗಿದೆ.

ವರ್ಷಕ್ಕೆ ₹6,000 ಸಹಾಯಧನ

ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು 2019ರಲ್ಲಿ ಪಿಎಂ-ಕಿಸಾನ್ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯಡಿ ಅರ್ಹ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2,000ರಂತೆ ಒಟ್ಟು ₹6,000 ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

ಬೀಜ, ರಸಗೊಬ್ಬರ, ನೀರಾವರಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಈ ಹಣ ನೆರವಾಗುತ್ತಿದೆ. ಕಳೆದ ಮಾರ್ಚ್ 13ರಂದು 22ನೇ ಕಂತಿನಡಿ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ ₹18,640 ಕೋಟಿ ಜಮೆ ಮಾಡಲಾಗಿತ್ತು.

e-KYC ಇಲ್ಲದಿದ್ದರೆ ಹಣ ಸಿಗುವುದಿಲ್ಲ

23ನೇ ಕಂತಿನ ಹಣ ಪಡೆಯಲು ರೈತರು e-KYC (ಇ-ಕೆವೈಸಿ) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಒಂದು ವೇಳೆ e-KYC ಪೂರ್ಣಗೊಳ್ಳದಿದ್ದರೆ, ಈ ಕಂತಿನ ಹಣ ರೈತರ ಖಾತೆಗೆ ಜಮೆಯಾಗುವುದಿಲ್ಲ. ನಕಲಿ ಫಲಾನುಭವಿಗಳನ್ನು ತಡೆದು, ಅರ್ಹ ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಮಾತ್ರ ಯೋಜನೆಯ ಲಾಭ ತಲುಪಿಸುವ ಉದ್ದೇಶದಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

ಆನ್‌ಲೈನ್‌ನಲ್ಲಿ e-KYC ಪೂರ್ಣಗೊಳಿಸುವ ವಿಧಾನ

ರೈತರು ಜೂನ್ 20ರೊಳಗೆ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ e-KYC ಪೂರ್ಣಗೊಳಿಸಬಹುದು.

  1. ಪಿಎಂ-ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಮುಖಪುಟದಲ್ಲಿರುವ “e-KYC” ಆಯ್ಕೆಯನ್ನು ಕ್ಲಿಕ್ ಮಾಡಿ.
  3. ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ.
  4. ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ನಮೂದಿಸಿ.
  5. ವಿವರಗಳ ಪರಿಶೀಲನೆಯ ನಂತರ e-KYC ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

OTP ಬರದಿದ್ದರೆ ಸಮೀಪದ CSC (Common Service Center) ಅಥವಾ ಜನಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ (ಬೆರಳಚ್ಚು) ಮೂಲಕ e-KYC ಪೂರ್ಣಗೊಳಿಸಬಹುದು.

e-KYC ಸ್ಥಿತಿ ಪರಿಶೀಲಿಸುವುದು ಹೇಗೆ?

  1. ಪಿಎಂ-ಕಿಸಾನ್ ಅಧಿಕೃತ ವೆಬ್‌ಸೈಟ್ ತೆರೆಯಿರಿ.
  2. “Know Your Status” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  3. ನಿಮ್ಮ ನೋಂದಣಿ ಸಂಖ್ಯೆ ಹಾಗೂ ಕ್ಯಾಪ್ಚಾ ಕೋಡ್ ನಮೂದಿಸಿ.
  4. ತಕ್ಷಣವೇ ನಿಮ್ಮ e-KYC ಸ್ಥಿತಿ ಸಕ್ರಿಯವಾಗಿದೆಯೇ ಎಂಬ ಮಾಹಿತಿ ಪರದೆಯಲ್ಲಿ ಕಾಣಿಸುತ್ತದೆ.

ಹೀಗಾಗಿ, ಯೋಜನೆಯ ಫಲಾನುಭವಿಗಳಾದ ಎಲ್ಲಾ ರೈತರು ಜೂನ್ 20ರೊಳಗೆ ತಮ್ಮ e-KYC ಸ್ಥಿತಿಯನ್ನು ಪರಿಶೀಲಿಸಿ, ಯಾವುದೇ ತೊಂದರೆ ಇಲ್ಲದೆ ₹2,000 ಹಣವನ್ನು ತಮ್ಮ ಖಾತೆಗೆ ಪಡೆಯುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ