LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Rain in Karnataka : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದವರೆಗೆ ರಾಜ್ಯದ ಹಲವೆಡೆ ಮಳೆಯ ತೀವ್ರತೆ ಹಾಗೂ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು, ಸೆಪ್ಟಂಬರ್ 19 ರಿಂದ 24ರ ವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದ ಒಟ್ಟು 14 ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಪ್ರದೇಶಗಳಿಗೆ ಸೆಪ್ಟಂಬರ್ 19 ರಿಂದ 24ರ ವರೆಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಪ್ರಮುಖವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ.

ಇನ್ನು ರಾಜಧಾನಿ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಳೆಯ ಜೊತೆಗೆ ಗುಡುಗು-ಮಿಂಚಿನ ಅಬ್ಬರ ಇರಲಿದ್ದು, ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇದು ಈ ವಾರದ 'ವೃಷಭ ರಾಶಿ'ಯವರ ಭವಿಷ್ಯ: ಹೇಗಿದೆ ಓದಿ!GOOD NEWS: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 'OPS ಭಾಗ್ಯ': ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶಹೀಗಿದೆ 'ಮೇಷ ರಾಶಿ'ಯ ವಾರದ ಭವಿಷ್ಯ ಓದಿ!BIG NEWS: ಸೂರಜ್ ರೇವಣ್ಣ ಪ್ರಕರಣದಲ್ಲಿ ಮರು ತನಿಖೆಯಲ್ಲೂ ಸಿಗಲ್ಲಿ ಸಾಕ್ಷಿ: 2ನೇ ಬಾರಿಯೂ ‘ಬಿ’ ರಿಪೋರ್ಟ್ ಸಲ್ಲಿಸಿದ CIDನಾಳೆ ಕಸ್ತೂರಿ ರಂಗನ್ ವರದಿ ವಿರೋಧಿಸಿ 'ಶೃಂಗೇರಿ ಬಂದ್'ಗೆ ಕರೆಮುಪ್ಪಾನೆಯಲ್ಲಿ ಪ್ರವಾಸಿಗರ ಅಕ್ರಮ ಚಟುವಟಿಕೆ: ಈ ಖಡಕ್ ಎಚ್ಚರಿಕೆ ಕೊಟ್ಟ ಕಾರ್ಗಲ್ ವೈಲ್ಟ್ ಲೈಫ್ RFO ನವೀನ್ ಕುಮಾರ್BREAKING : ಡಿಜೆ ಸದ್ದಿಗೆ ಮಗು ಅಸ್ವಸ್ಥ : ರಾಯಚೂರು ಡಿಸಿ ನಿವಾಸದ ಮುಂದೆ ತಂದೆಯಿಂದ ಪ್ರತಿಭಟನೆ!Rain in Karnataka : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಅರೆಸ್ಟ್ : ವಿಜಯಪುರ ಪೋಲೀಸರ ಆಂಟಿ ರೌಡಿ ಸ್ಕ್ವಾಡ್ ಕಾರ್ಯಾಚರಣೆ ಯಶಸ್ವಿಬೆಂಗಳೂರಲ್ಲಿ ಸುಟ್ಟ ಸ್ಥಿತಿಯಲ್ಲಿ 'KSRP' ಕಾನ್ಸ್ಟೇಬಲ್ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ!