LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Rice Price Hike: ರಾಜ್ಯ ಜನತೆಗೆ ಮತ್ತೊಂದು ಶಾಕ್: ಮತ್ತೆ ಅಕ್ಕಿ ದರ ಭಾರಿ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಹಾಗೂ ನೀರಿನ ಅಭಾವದ ಪರಿಣಾಮ ಇದೀಗ ಜನಸಾಮಾನ್ಯರ ಅಡುಗೆ ಮನೆಗೆ ನೇರವಾಗಿ ತಟ್ಟಿದೆ. ಜಲಾಶಯಗಳಲ್ಲಿ ನೀರಿನ ಕೊರತೆಯಿಂದ ಭತ್ತದ ಇಳುವರಿ ಕುಸಿದಿರುವ ಬೆನ್ನಲ್ಲೇ, ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯಾದ್ಯಂತ ಅಕ್ಕಿ ದರ ಮತ್ತೊಮ್ಮೆ ಗಗನಕ್ಕೇರಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಈಗಾಗಲೇ ಎರಡು ಬಾರಿ ಬೆಲೆ ಏರಿಕೆಯಾಗಿದ್ದು, ಇಂದಿನಿಂದ (ಸೆಪ್ಟೆಂಬರ್ 15) ಮೂರನೇ ಬಾರಿಗೆ ಅಕ್ಕಿ ದರ ಪರಿಷ್ಕರಣೆಯಾಗಿರುವುದು ಮಧ್ಯಮ ವರ್ಗ ಹಾಗೂ ಬಡ ಕುಟುಂಬಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಯಾವ ಅಕ್ಕಿಗೆ ಎಷ್ಟು ಬೆಲೆ ಏರಿಕೆ?

ನೂತನ ದರ ಪರಿಷ್ಕರಣೆಯ ಪ್ರಕಾರ, ಸಾಮಾನ್ಯ ಬಳಕೆಯ ಅಕ್ಕಿಯ ದರ ಪ್ರತಿ ಕೆಜಿಗೆ ₹5 ರಿಂದ ₹10 ರಷ್ಟು ಹೆಚ್ಚಳವಾಗಿದ್ದರೆ, ಪ್ರೀಮಿಯಂ ಹಾಗೂ ಉತ್ತಮ ಗುಣಮಟ್ಟದ ಅಕ್ಕಿಯ ಬೆಲೆ ಕೆಜಿಗೆ ₹10 ರಿಂದ ₹20 ರಷ್ಟು ಏರಿಕೆಯಾಗಿದೆ. ಕ್ವಿಂಟಾಲ್ ಲೆಕ್ಕದಲ್ಲಿ ಸಗಟು ಮಾರುಕಟ್ಟೆಯಲ್ಲಿ ಸುಮಾರು ₹1,000 ವರೆಗೆ ದರ ಹೆಚ್ಚಾಗಿದೆ. ಚೀಲಗಳ ಲೆಕ್ಕಾಚಾರದಲ್ಲಿ ನೋಡುವುದಾದರೆ, ಸಾಮಾನ್ಯ ಅಕ್ಕಿಯ ಪ್ರತಿ ಬ್ಯಾಗ್‌ಗೆ ₹200 ಹಾಗೂ ಉತ್ತಮ ದರ್ಜೆಯ ಅಕ್ಕಿ ಚೀಲಕ್ಕೆ ₹250 ರಿಂದ ₹300 ರಷ್ಟು ಹೆಚ್ಚುವರಿ ಹಣ ತೆರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಮತ್ತಷ್ಟು ದುಬಾರಿ

ಸಗಟು (ಹೋಲ್‌ಸೇಲ್) ಮಾರುಕಟ್ಟೆಯಲ್ಲಿ ಕೆಜಿಗೆ ₹10 ರಿಂದ ₹20 ರಷ್ಟು ಏರಿಕೆಯಾಗಿದ್ದರೆ, ಸ್ಥಳೀಯ ಚಿಲ್ಲರೆ ಅಂಗಡಿಗಳಲ್ಲಿ ಗ್ರಾಹಕರಿಗೆ ತಲುಪುವಷ್ಟರಲ್ಲಿ ಪ್ರತಿ ಕೆಜಿಗೆ ₹20 ರಿಂದ ಬರೋಬ್ಬರಿ ₹40 ರಷ್ಟು ಹೊರೆ ಬೀಳಲಿದೆ. ಇಂದಿನಿಂದಲೇ ಈ ಪರಿಷ್ಕೃತ ದರಗಳು ಮಾರುಕಟ್ಟೆಯಲ್ಲಿ ಜಾರಿಗೆ ಬಂದಿದ್ದು, ದಿನಸಿ ಖರೀದಿಗೆ ಬಂದ ಗ್ರಾಹಕರು ದರಪಟ್ಟಿಯನ್ನು ನೋಡಿ ಕಂಗಾಲಾಗಿದ್ದಾರೆ.

ದರ ಏರಿಕೆಗೆ ಅಸಲಿ ಕಾರಣಗಳೇನು?

ರಾಜ್ಯದಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದೆ ಭತ್ತದ ಬೆಳೆಗೆ ಭಾರಿ ಹೊಡೆತ ಬಿದ್ದಿರುವುದು ಹಾಗೂ ಕಚ್ಚಾ ಸಾಮಗ್ರಿಗಳ ಅಭಾವವೇ ಬೆಲೆ ಏರಿಕೆಗೆ ಮುಖ್ಯ ಕಾರಣವೆಂದು ವ್ಯಾಪಾರಿಗಳು ತಿಳಿಸಿದ್ದಾರೆ. ಇದರ ಜತೆಗೆ, ದೇಶೀಯ ಮಾರುಕಟ್ಟೆಯಿಂದ ವಿದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ರಫ್ತಾಗುತ್ತಿರುವುದು ಕೂಡ ಸ್ಥಳೀಯವಾಗಿ ಪೂರೈಕೆಯಲ್ಲಿ ವ್ಯತ್ಯಯ ತಂದೊಡ್ಡಿದೆ. ಸ್ಥಳೀಯ ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲದಿರುವುದು ಬೆಲೆ ಏರಿಕೆಗೆ ತುಪ್ಪ ಸುರಿದಂತಾಗಿದೆ.

ಅಕ್ಟೋಬರ್‌ನಲ್ಲಿ ಮತ್ತಷ್ಟು ಏರಿಕೆಯ ಆತಂಕ

ಸದ್ಯದ ಪರಿಸ್ಥಿತಿ ಹೀಗಿರುವಾಗಲೇ, ಅಕ್ಟೋಬರ್ ತಿಂಗಳಲ್ಲಿ ಅಕ್ಕಿ ಬೆಲೆ ಮತ್ತೊಂದು ಹಂತದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಗಟು ವರ್ತಕರು ಮುನ್ಸೂಚನೆ ನೀಡಿದ್ದಾರೆ. ಹಬ್ಬದ ಸೀಸನ್ ಸಮೀಪಿಸುತ್ತಿರುವ ಹೊತ್ತಲ್ಲೇ ಆಹಾರ ಪದಾರ್ಥಗಳ ಬೆಲೆ ನಿರಂತರವಾಗಿ ಏರುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಯಾನಕ ಕ್ಷಣ…! ಜಲಪಾತದ ನೀರಲ್ಲಿ ಮಗು ಎತ್ತಿಕೊಂಡು ನಿಂತಿದ್ದ ವ್ಯಕ್ತಿ ಮೇಲೆ ಹಠಾತ್ ಬಿದ್ದ ಹಾವು | WATCH VIDEOಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಸುಸ್ಥಿರ ಸಾರಿಗೆ ಸೇವೆ: ಬಿಎಂಟಿಸಿಗೆ ಪ್ರತಿಷ್ಠಿತ ELCITA ‘ಗೇಮ್ ಚೇಂಜರ್’ ಪ್ರಶಸ್ತಿ ಗೌರವ!Rice Price Hike: ರಾಜ್ಯ ಜನತೆಗೆ ಮತ್ತೊಂದು ಶಾಕ್: ಮತ್ತೆ ಅಕ್ಕಿ ದರ ಭಾರಿ ಏರಿಕೆ!ವ್ಯಾಪಾರಿಗಳಿಗೆ ಪಾವತಿಸುವ 2,000 ರೂ.ಗಿಂತ ಹೆಚ್ಚಿನ UPI ಪಾವತಿಗೆ 0.4% ಶುಲ್ಕ; ಗ್ರಾಹಕರಿಗೆ ಉಚಿತ ಸೇವೆ ಮುಂದುವರಿಕೆಭಯಾನಕ ಕ್ಷಣ…! ಜಲಪಾತದ ನೀರಲ್ಲಿ ಮಗು ಎತ್ತಿಕೊಂಡು ನಿಂತಿದ್ದ ವ್ಯಕ್ತಿ ಮೇಲೆ ಹಠಾತ್ ಬಿದ್ದ ಹಾವು | WATCH VIDEOdeoBREAKING: ಪಿಜಿಸಿಇಟಿಗೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟBREAKING: ರಾಜ್ಯ ಸರ್ಕಾರದಿಂದ 'ಇಂಜಿನಿಯರ್‌'ಗಳಿಗೆ ಬಿಗ್ ಗಿಫ್ಟ್: ಇನ್ಮುಂದೆ ಹೆಸರಿನ ಮುಂದೆ 'Er' ಬಳಸಲು ಅನುಮತಿಸಿ ಆದೇಶ!ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸುವಂತೆ ಒತ್ತಾಯಿಸುವುದು ಆಕೆಯ ಘನತೆಯ ಹಕ್ಕಿಗೆ ಭಂಗ ತರುತ್ತದೆ: ದೆಹಲಿ ಹೈಕೋರ್ಟ್BIG NEWS: ನಾಳೆಯಿಂದ 5 ದಿನ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 'ಮದ್ಯ ಮಾರಾಟ' ನಿಷೇಧಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್