LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

RSS ಅಂಧಭಕ್ತರನ್ನು ಸೃಷ್ಟಿಸುವ ಕಾರ್ಖಾನೆ: KPCC ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ಧಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತ ಹಾಗೂ ಕಾರ್ಯವೈಖರಿ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಮತ್ತೊಮ್ಮೆ ತೀವ್ರ ವಾಕ್ಪ್ರಹಾರ ನಡೆಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಸ್ಥೆಯನ್ನು ಸರ್ವವ್ಯಾಪಿ 'ಆಕ್ಟೋಪಸ್'ಗೆ ಹೋಲಿಸಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

'ಆಕ್ಟೋಪಸ್‌ನಂತೆ ಎಲ್ಲಾ ರಂಗಗಳಿಗೂ ಲಗ್ಗೆ':

ಆರ್‌ಎಸ್‌ಎಸ್ ಅನ್ನು ಕಬಂಧಬಾಹುಗಳ ಆಕ್ಟೋಪಸ್‌ಗೆ ಹೋಲಿಸಿದ ಹರಿಪ್ರಸಾದ್, "ಈ ಸಂಘಟನೆಯು ಕೇವಲ ಸಾರ್ವಜನಿಕ ರಂಗಕ್ಕೆ ಸೀಮಿತವಾಗಿರದೆ ಕಾರ್ಯಾಂಗ, ನ್ಯಾಯಾಂಗ ಮತ್ತು ಮಾಧ್ಯಮ ಕ್ಷೇತ್ರಗಳಲ್ಲೂ ಆಳವಾಗಿ ಬೇರೂರಿದೆ. ಸ್ವತಂತ್ರ ಭಾರತದ ಮೂಲ ಆಶಯಗಳಿಗೆ ತದ್ವಿರುದ್ಧವಾದ ವಿಚಾರಗಳನ್ನು ಬಿತ್ತುವ ಮೂಲಕ ದೇಶವನ್ನು ಅವನತಿಯತ್ತ ಕೊಂಡೊಯ್ಯಲಾಗುತ್ತಿದೆ. ಪ್ರಸ್ತುತ ದೇಶವು ಕವಲುದಾರಿಯಲ್ಲಿ ನಿಂತಿದ್ದು, ಒಂದು ಬದಿಯಲ್ಲಿ ಗಾಂಧಿ ತತ್ವಾದರ್ಶಗಳಿದ್ದರೆ ಮತ್ತೊಂದು ಬದಿಯಲ್ಲಿ ಸಂಘ ಪರಿವಾರದ ಸಿದ್ಧಾಂತವಿದೆ. ಈ ಎರಡರಲ್ಲಿ ಯಾವ ಹಾದಿ ಆಯ್ದುಕೊಳ್ಳಬೇಕು ಎಂಬುದನ್ನು ಜನತೆ ಗಂಭೀರವಾಗಿ ಯೋಚಿಸಬೇಕಿದೆ" ಎಂದರು.

ಮೋಹನ್ ಭಾಗವತ್‌ಗೆ ಸವಾಲು, ಜೆನ್-ಝೀ ದಾರಿತಪ್ಪಿಸುವ ಆರೋಪ:

ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರ ನಿಲುವನ್ನು ಪ್ರಶ್ನಿಸಿದ ಅವರು, "ಮುಸ್ಲಿಮರನ್ನು ದ್ವೇಷಿಸುವವರು ಹಿಂದೂಗಳೇ ಅಲ್ಲ ಎಂದು ವಿದೇಶಿ ನೆಲದಲ್ಲಿ ಹೇಳಿಕೆ ನೀಡುವ ಭಾಗವತ್, ಅದೇ ಮಾತನ್ನು ಸ್ವದೇಶದಲ್ಲಿ ಭಾರತೀಯರ ಮುಂದೆ ನಿಂತು ಹೇಳುವ ಧೈರ್ಯ ತೋರಲಿ. ಮತ್ತೊಂದೆಡೆ, ಯುವ ಪೀಳಿಗೆಯನ್ನು (ಜೆನ್-ಝೀ) ಮೀಸಲಾತಿಯ ವಿರುದ್ಧ ಎತ್ತಿಕಟ್ಟಿ ದಾರಿ ತಪ್ಪಿಸುವ ಸಂಚು ನಡೆಸಲಾಗುತ್ತಿದೆ" ಎಂದು ಕಿಡಿಕಾರಿದರು.

'ಅಂಧಭಕ್ತರ ಸೃಷ್ಟಿ, ಸುಳ್ಳು ಹೇಳುವುದೇ ತರಬೇತಿ':

ಸಂಘಟನೆಯ ತರಬೇತಿ ಶಿಬಿರಗಳ ಕುರಿತು ವ್ಯಂಗ್ಯವಾಡಿದ ಹರಿಪ್ರಸಾದ್, "ಆರ್‌ಎಸ್‌ಎಸ್ ಕೇವಲ ಅಂಧಭಕ್ತರನ್ನು ಸೃಷ್ಟಿಸುವ ಕಾರ್ಖಾನೆಯಾಗಿದೆ. ಸ್ವಯಂಸೇವಕರಿಗೆ ಸತತ ಮೂರು ತಿಂಗಳ ಕಾಲ ಕೇವಲ ಸಮಾಜದಲ್ಲಿ ಸುಳ್ಳು ಮತ್ತು ವದಂತಿಗಳನ್ನು ಹೇಗೆ ಹಬ್ಬಿಸಬೇಕು ಎಂದಷ್ಟೇ ತರಬೇತಿ ನೀಡಲಾಗುತ್ತದೆ. ಕಾರ್ಯಕರ್ತರನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಬಳಿಕ ನಡುನೀರಿನಲ್ಲಿ ಕೈಬಿಡುವುದು ಇವರ ಚಾಳಿ. ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನೇ ತಮ್ಮ ಕಾರ್ಯಕರ್ತನಲ್ಲ ಎಂದು ಸಾರಾಸಗಟಾಗಿ ತಳ್ಳಿಹಾಕಿದ ಇತಿಹಾಸ ಇವರದ್ದು" ಎಂದು ತೀವ್ರ ಆಕ್ರೋಶ ಹೊರಹಾಕಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ