LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING: ರಾಜ್ಯಾಧ್ಯಂತ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ!

ಬೆಂಗಳೂರು: ನಕಲಿ ಔಷಧಿ ಮಾರಾಟ ಜಾಲದ ಬೆನ್ನತ್ತಿದ್ದ ರಾಜ್ಯ ಆರೋಗ್ಯ ಇಲಾಖೆ, ಇದೀಗ ಯಾವುದೇ ಅಧಿಕೃತ ವೈದ್ಯಕೀಯ ಪದವಿ ಹಾಗೂ ನೋಂದಣಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರು ಮತ್ತು ಅನಧಿಕೃತ ಕ್ಲಿನಿಕ್‌ಗಳ ವಿರುದ್ಧ ಕಠಿಣ ಸಮರ ಸಾರಿದೆ.

2024ರಿಂದ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆಯಲ್ಲಿ, ಅಲೋಪಥಿ, ಆಯುರ್ವೇದ, ಹೋಮಿಯೋಪಥಿ ಮತ್ತು ನ್ಯಾಚುರೋಪಥಿ ಹೆಸರಿನಲ್ಲಿ ಕಾನೂನುಬಾಹಿರವಾಗಿ ಚಿಕಿತ್ಸೆ ನೀಡುತ್ತಿದ್ದ 583ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಕಂಪೌಂಡರ್, ನರ್ಸ್‌ಗಳೇ ಇಲ್ಲಿ 'ಡಾಕ್ಟರ್ಸ್'!

ವಿಚಾರಣೆ ವೇಳೆ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದ್ದು, ಪತ್ತೆಯಾದವರಲ್ಲಿ ಹೆಚ್ಚಿನವರು ಈ ಹಿಂದೆ ಆಸ್ಪತ್ರೆಗಳಲ್ಲಿ ಲ್ಯಾಬ್ ಅಸಿಸ್ಟೆಂಟ್‌ಗಳು, ನರ್ಸ್‌ಗಳು, ಕಂಪೌಂಡರ್‌ಗಳು ಹಾಗೂ ಕ್ಲಿನಿಕ್ ಸಹಾಯಕರುಗಳಾಗಿ ಕೆಲಸ ಮಾಡುತ್ತಿದ್ದವರಾಗಿದ್ದಾರೆ. ವೈದ್ಯರ ಕೆಲಸವನ್ನು ನೋಡಿ ಸ್ವಲ್ಪ ಅನುಭವ ಪಡೆದ ನಂತರ, ಸ್ವಂತವಾಗಿ ಅನಧಿಕೃತ ಕ್ಲಿನಿಕ್‌ಗಳನ್ನು ತೆರೆದು ಜನರ ಜೀವದ ಜೊತೆ ಆಟವಾಡುತ್ತಿದ್ದರು.

ವಿಶೇಷವಾಗಿ ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಧಾರವಾಡ ಜಿಲ್ಲೆಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಇನ್ನು ಗಡಿ ಪ್ರದೇಶ ಹಾಗೂ ಬೆಂಗಳೂರಿನಲ್ಲಿ ಕೆಲವರು ಒಂದೇ ಕಡೆ ಇರದೆ, ಮೊಬೈಲ್ ಸಂಖ್ಯೆ ಮತ್ತು ಸ್ಥಳಗಳನ್ನು ಪದೇಪದೆ ಬದಲಾಯಿಸುತ್ತಾ 'ಮೊಬೈಲ್ ಕ್ಲಿನಿಕ್' ಮಾದರಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ.

ಜಿಲ್ಲಾಮಟ್ಟದಲ್ಲಿ ಕಾರ್ಯಪಡೆ ರಚನೆ

ನಕಲಿ ವೈದ್ಯರು ಹಾಗೂ ನಕಲಿ ಔಷಧ ದಂಧೆಯ ನಡುವಿನ ಲಿಂಕ್ ಕತ್ತರಿಸಲು ಆರೋಗ್ಯ, ಪೊಲೀಸ್ ಹಾಗೂ ಔಷಧ ಆಡಳಿತ ಇಲಾಖೆಗಳನ್ನೊಳಗೊಂಡ 'ವಿಶೇಷ ಕಾರ್ಯಪಡೆ'ಗಳನ್ನು ಜಿಲ್ಲಾಮಟ್ಟದಲ್ಲಿ ರಚಿಸಲಾಗಿದೆ. ಈ ತಂಡಗಳು ದಿಢೀರ್ ದಾಳಿ ನಡೆಸಿ ಅನಧಿಕೃತ ಕ್ಲಿನಿಕ್‌ಗಳಿಗೆ ಸೀಲ್ ಹಾಕುತ್ತಿವೆ.

ವಿಶೇಷ ಎಚ್ಚರಿಕೆ: ನಿಯಮ ಮೀರಿದರೆ ಜೈಲು, ಲಕ್ಷಾಂತರ ದಂಡ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (KPME) ಕಾಯ್ದೆಯಡಿ ಇಲಾಖೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ:

  • ಮೊದಲ ಬಾರಿ ತಪ್ಪು ಎಸಗಿದರೆ: ₹25,000 ವರೆಗೆ ದಂಡ.

  • ಎರಡನೇ ಬಾರಿ ನಿಯಮ ಉಲ್ಲಂಘಿಸಿದರೆ: ₹2.5 ಲಕ್ಷದವರೆಗೆ ದಂಡ ಮತ್ತು 1 ವರ್ಷ ಜೈಲು ಶಿಕ್ಷೆ.

  • ಮೂರನೇ ಬಾರಿಯೂ ಮುಂದುವರಿಸಿದರೆ: ₹5 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳ ಕಾಲ ಜೈಲು ಶಿಕ್ಷೆ.

ಸಾರ್ವಜನಿಕರಿಗೆ ಇಲಾಖೆಯ ಮುಖ್ಯ ಮನವಿ

ಸಾರ್ವಜನಿಕರು ಚಿಕಿತ್ಸೆಗೆ ತೆರಳುವ ಮುನ್ನ ವೈದ್ಯರ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು (KMC Registration) ಕಡ್ಡಾಯವಾಗಿ ಪರಿಶೀಲಿಸಬೇಕು. ಯಾವುದೇ ವ್ಯಕ್ತಿ ಅಥವಾ ಕ್ಲಿನಿಕ್ ಮೇಲೆ ಅನುಮಾನ ಬಂದಲ್ಲಿ ತಕ್ಷಣವೇ ಜಿಲ್ಲಾ ಆರೋಗ್ಯಾಧಿಕಾರಿ (DHO) ನೇತೃತ್ವದ ಪ್ರಾಧಿಕಾರಕ್ಕೆ ದೂರು ನೀಡುವಂತೆ ಹಾಗೂ ನಕಲಿ ವೈದ್ಯರ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸುವಂತೆ ಆರೋಗ್ಯ ಇಲಾಖೆ ಕೋರಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ