LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ಚಿಕ್ಕ ಪಾನ್ ಅಂಗಡಿಗೆ ₹1.85 ಲಕ್ಷ ವಿದ್ಯುತ್ ಬಿಲ್ ; ಭಯದಿಂದ ವ್ಯಾಪಾರಿ ಆತ್ಮಹತ್ಯೆ.!

ಉತ್ತರ ಪ್ರದೇಶದ Ghazipur ಜಿಲ್ಲೆಯ ಸೈದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುರಾದ್‌ಚಕ್ ಗ್ರಾಮದಲ್ಲಿ ನಡೆದ ದುರ್ಘಟನೆ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಅತಿಯಾದ ವಿದ್ಯುತ್ ಬಿಲ್, ಭಾರೀ ದಂಡ ಹಾಗೂ ಅಧಿಕಾರಿಗಳ ಒತ್ತಡದಿಂದ ಮನನೊಂದು ಪಾನ್ ಅಂಗಡಿ ಮಾಲೀಕ ಸುರೇಂದ್ರ ಕಶ್ಯಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಬರೆದಿರುವ ಆತ್ಮಹತ್ಯೆ ಪತ್ರ ಇದೀಗ ಸರ್ಕಾರದ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ವಿವರಗಳ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ವಿದ್ಯುತ್ ಇಲಾಖೆಯ ವಿಜಿಲೆನ್ಸ್ ತಂಡ ಸುರೇಂದ್ರ ನಡೆಸುತ್ತಿದ್ದ ಸಣ್ಣ ಅಂಗಡಿಯಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ವಿದ್ಯುತ್ ಬಳಕೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪದಡಿ ಸುಮಾರು ₹1.12 ಲಕ್ಷ ದಂಡ ವಿಧಿಸಲಾಗಿತ್ತು. ಜೊತೆಗೆ ಬಾಕಿ ಉಳಿದಿದ್ದ ವಿದ್ಯುತ್ ಬಿಲ್ಲನ್ನೂ ಪಾವತಿಸುವಂತೆ ಸೂಚಿಸಲಾಗಿತ್ತು.

ಕನಿಕರ ತೋರದ ಅಧಿಕಾರಿಗಳು

ನಂತರ ಪ್ರಕರಣ ತಹಶೀಲ್ದಾರ್ ಕಚೇರಿಗೆ ತಲುಪಿದ ಹಿನ್ನೆಲೆಯಲ್ಲಿ ರಿಕವರಿ ಸರ್ಟಿಫಿಕೇಟ್ (RC) ಜಾರಿಯಾಯಿತು. ಇದರಿಂದ ಬಾಕಿ ಮೊತ್ತವು ಸುಮಾರು ₹1.85 ಲಕ್ಷಕ್ಕೆ ಏರಿಕೆಯಾಯಿತು ಎಂದು ತಿಳಿದುಬಂದಿದೆ.

ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಲು ಸಾಧ್ಯವಾಗದಿದ್ದರೂ, ಬಿಲ್ ಮೊತ್ತವನ್ನು ಕಡಿಮೆ ಮಾಡುವಂತೆ ಸುರೇಂದ್ರ ಹಲವು ಬಾರಿ ವಿದ್ಯುತ್ ಇಲಾಖೆ ಹಾಗೂ ಕಂದಾಯ ಅಧಿಕಾರಿಗಳ ಮೊರೆ ಹೋಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಆದರೆ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡದೆ, ಹಣ ಪಾವತಿಸುವಂತೆ ನಿರಂತರ ಒತ್ತಡ ಹೇರಿದ್ದರು. ಅಂಗಡಿಯನ್ನು ಮುಚ್ಚಿಸುವುದಾಗಿ ಎಚ್ಚರಿಕೆ ನೀಡಿ ಹಲವು ಬಾರಿ ಕಿರುಕುಳ ನೀಡಿದ್ದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

“ನಾನು ಸತ್ತರೆ ಸಮಸ್ಯೆ ಮುಗಿಯುತ್ತದೆ”

ಮೃತರ ಪತ್ನಿ ಜ್ಞಾನತಿ ನೀಡಿದ ಮಾಹಿತಿಯ ಪ್ರಕಾರ, ಸುರೇಂದ್ರ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು.”ನಾನು ಸತ್ತರೆ ಈ ಬಿಲ್ ಸಮಸ್ಯೆ ಮುಗಿಯುತ್ತದೆ” ಎಂದು ಅವರು ಆಗಾಗ ಹೇಳುತ್ತಿದ್ದರು ಎಂದು ಪತ್ನಿ ಕಣ್ಣೀರಿಟ್ಟಿದ್ದಾರೆ.ಇಬ್ಬರು ಪುತ್ರಿಯರ ಭವಿಷ್ಯ, ಅವರ ಮದುವೆಯ ಹೊಣೆ, ಸಾಲದ ಭಾರ ಹಾಗೂ ಅಧಿಕಾರಿಗಳ ಒತ್ತಡ ಸೇರಿ ಅವರನ್ನು ತೀವ್ರ ನಿರಾಶೆಗೆ ತಳ್ಳಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಈ ಘಟನೆ ಬಳಿಕ ಗ್ರಾಮಸ್ಥರು ವಿದ್ಯುತ್ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಆತ್ಮಹತ್ಯೆಗೆ ಕಾರಣವಾದ ಪರಿಸ್ಥಿತಿಗಳು ಹಾಗೂ ಅಧಿಕಾರಿಗಳ ಪಾತ್ರದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿರುವ ವಿವರಗಳು ಹಾಗೂ ಕುಟುಂಬ ಸದಸ್ಯರ ಆರೋಪಗಳ ಆಧಾರದ ಮೇಲೆ ಪ್ರಕರಣದ ಸತ್ಯಾಂಶವನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ.

ವಿದ್ಯುತ್ ಬಿಲ್ ಹೆಚ್ಚು ಬಂದರೆ ದೂರು ನೀಡಬಹುದೇ?

ಪ್ರಶ್ನೆ: ವಿದ್ಯುತ್ ಬಿಲ್ ಹೆಚ್ಚು ಬಂದರೆ ದೂರು ನೀಡಬಹುದೇ?
ಉತ್ತರ: ಹೌದು.

ಪ್ರಶ್ನೆ: ವಿದ್ಯುತ್ ಬಿಲ್ ಹೆಚ್ಚು ಬಂದರೆ ಯಾರಿಗೆ ದೂರು ನೀಡಬೇಕು?
ಉತ್ತರ: ರಾಷ್ಟ್ರೀಯ ಟೋಲ್-ಫ್ರೀ ಸಹಾಯವಾಣಿ ಸಂಖ್ಯೆ 1912 ಗೆ ಕರೆ ಮಾಡಿ ದೂರು ದಾಖಲಿಸಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆ