LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ಅಶ್ಲೀಲ ವಿಡಿಯೋಗಳ ವ್ಯಸನ ; 9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ.!

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕೇವಲ 12 ವರ್ಷದ ಬಾಲಕನೊಬ್ಬ (ಸಂತ್ರಸ್ತೆಯ ಸಂಬಂಧದಲ್ಲಿ ಮಾವನಾಗುವವನು) ಅಶ್ಲೀಲ ವಿಡಿಯೋಗಳ ಪ್ರಭಾವಕ್ಕೆ ಒಳಗಾಗಿ, ಮದ್ಯದ ಅಮಲಿನಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಹೆಣ್ಣುಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯ ಬಳಿಕ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಹೊಲದ ಶೆಡ್‌ನಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. check hedline ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ರಾತ್ರಿ ಮಗು ತನ್ನ ತಾಯಿಯ ಪಕ್ಕದಲ್ಲಿ ಮಲಗಿತ್ತು. ಮಧ್ಯರಾತ್ರಿ ಸುಮಾರು 2 ಗಂಟೆಗೆ ತಾಯಿ ಎಚ್ಚರಗೊಂಡಾಗ ಮಗು ಕಾಣಿಸದಿದ್ದರಿಂದ ಕುಟುಂಬಸ್ಥರು ಆತಂಕಗೊಂಡು ಸುತ್ತಮುತ್ತ ಹುಡುಕಾಟ ನಡೆಸಿದರು. ಆದರೆ ರಾತ್ರಿ ಪೂರ್ತಿ ಮಗುವಿನ ಸುಳಿವು ಸಿಗಲಿಲ್ಲ.

ಶನಿವಾರ ಬೆಳಿಗ್ಗೆ ಗ್ರಾಮದ ಕೆಲ ಸ್ಥಳೀಯರು ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದ ಹೊಲದಲ್ಲಿದ್ದ ಶೆಡ್‌ನಲ್ಲಿ ಮಗು ಪ್ರಜ್ಞಾಹೀನವಾಗಿ ಬಿದ್ದಿರುವುದನ್ನು ಗಮನಿಸಿದರು. ಮಗುವಿನ ದೇಹದ ಮೇಲೆ ಗಂಭೀರ ಗಾಯಗಳಿರುವುದನ್ನು ಕಂಡ ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದರು. ವೈದ್ಯರು ಮಗುವಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದು, ಪ್ರಸ್ತುತ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಅನುಮಾನದ ಮೇರೆಗೆ ಮಗುವಿನ ಸಂಬಂಧಿಕನಾದ 12 ವರ್ಷದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ತಾನು ಮದ್ಯದ ಅಮಲಿನಲ್ಲಿ ಹಾಗೂ ಅಶ್ಲೀಲ ವಿಷಯಗಳನ್ನು ವೀಕ್ಷಿಸಿದ ಪರಿಣಾಮ ಈ ಕೃತ್ಯ ಎಸಗಿರುವುದಾಗಿ ಬಾಲಕ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋರಖ್‌ಪುರ ನಗರ ಪೊಲೀಸ್ ವರಿಷ್ಠಾಧಿಕಾರಿ ಈ ಘಟನೆಯನ್ನು ದೃಢಪಡಿಸಿದ್ದು, ಆರೋಪಿಯ ವಿರುದ್ಧ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ