LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ರಾಜ್ಯದ ‘BCM’ ಹಾಸ್ಟೆಲ್’ನಲ್ಲಿ ವಿದ್ಯಾರ್ಥಿನಿಯರ ಭರ್ಜರಿ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್, ಪೋಷಕರ ಆಕ್ರೋಶ

ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಬಿಸಿಎಂ (BCM) ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಮದ್ಯಪಾನ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಶಿಕ್ಷಣ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲ ವಿದ್ಯಾರ್ಥಿನಿಯರು ಹಾಸ್ಟೆಲ್ ಕೊಠಡಿಯೊಳಗೆ ಕುಳಿತು ಮದ್ಯ  ಸೇವನೆ ಮಾಡುತ್ತಿರುವ ದೃಶ್ಯಗಳು ಕಂಡುಬರುತ್ತಿವೆ ಎನ್ನಲಾಗಿದೆ. ವಿದ್ಯಾರ್ಥಿನಿಯರೇ ವಿಡಿಯೋ ಚಿತ್ರೀಕರಿಸಿಕೊಂಡಿದ್ದು, ಬಳಿಕ ಅದು ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾಗಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಬೆಳವಣಿಗೆ ಹಾಸ್ಟೆಲ್ ಭದ್ರತೆ ಹಾಗೂ ಶಿಸ್ತು ವ್ಯವಸ್ಥೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಾರ್ಡನ್ ವಿರುದ್ಧ ಆರೋಪ

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಹಾಸ್ಟೆಲ್ ವಾರ್ಡನ್ ವಿರುದ್ಧವೂ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರಕರಣವನ್ನು ಮುಚ್ಚಿಹಾಕಲು ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೂಡ ಕೇಳಿ ಬರುತ್ತಿದೆ.  ಈ ಕುರಿತು ಅಧಿಕೃತ ತನಿಖೆ ನಡೆಸುವಂತೆ ಆಗ್ರಹಗಳು ಕೇಳಿಬರುತ್ತಿವೆ. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ.

ಪೋಷಕರ ಆತಂಕ

ರಾಜ್ಯದ ವಿವಿಧ ಭಾಗಗಳು ಹಾಗೂ ಹೊರರಾಜ್ಯಗಳಿಂದಲೂ ವಿದ್ಯಾರ್ಥಿನಿಯರು ಈ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಮನೆಮಾಡಿದೆ. ಹಾಸ್ಟೆಲ್‌ಗೆ ಮದ್ಯ ಹೇಗೆ ತಲುಪಿತು? ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗಿದೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿದ್ದು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ವಿಡಿಯೋ ವೈರಲ್ ಆದ ಬಳಿಕ ವಿಶ್ವವಿದ್ಯಾಲಯ ಆಡಳಿತ ಎಚ್ಚೆತ್ತುಕೊಂಡಿದ್ದು, ಘಟನೆ ಕುರಿತು ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಲಿದ್ದು, ಅಧಿಕೃತ ವರದಿಗಾಗಿ ಕಾದು ನೋಡಬೇಕಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ