LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ BLOಗಳಿಂದ ಕರ್ತವ್ಯ ಲೋಪ: ಮನೆ ಮನೆಗೆ ತೆರಳಿ ಪರಿಶೀಲಿಸುವ ಬದಲು ಸಮುದಾಯ ಭವನದಲ್ಲಿ ಜನರನ್ನು ಕೂರಿಸಿ ಗಣತಿ: ಹೆಚ್.ಡಿ.ಕೆ ಆರೋಪ

ರಾಮನಗರ: ರಾಜ್ಯಾದ್ಯಂತ ಮತ ಪಟ್ಟಿ ಪರಿಷ್ಕರಣೆ ಕಾರ್ಯ (ಎಸ್ ಐಆರ್) ಆರಂಭವಾಗಿದೆ. ಮತದಾರರು ಸ್ವಯಂಪ್ರೇರಿತರಾಗಿ ಈ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ರಾಮನಗರದಲ್ಲಿ ಬಿಎಲ್‌ಒಗಳು ಕರ್ತವ್ಯ ಲೋಪವೆಸಗುತ್ತಿದ್ದು, ಮನೆ ಮನೆಗೆ ತೆರಳಿ ಪರಿಶೀಲಿಸುವ ಬದಲು ಸಮುದಾಯ ಭವನದಲ್ಲಿ ಕುಳಿತು ಜನರನ್ನು ಕರೆಸಿ ಗಣತಿ ನಮೂನೆ ವಿತರಿಸುತ್ತಿದ್ದಾರೆ ಬೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಆರೋಪಿಸಿದ್ದು, ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪಗಳು ಕಂಡುಬಂದಿವೆ. ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ನಿಖಿಲ್ ಕುಮಾಅರಸ್ವಾಮಿ ಹೇಳಿಕೆ ಬೆನ್ನಲ್ಲೆ ಇನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್‌ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ನಮ್ಮನ್ನ ಹೊರಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ