LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ 'SSLC ಅರ್ಧವಾರ್ಷಿಕ ಪರೀಕ್ಷೆ'ಯ ವೇಳಾಪಟ್ಟಿ ಪ್ರಕಟ | Karnataka SSLC Exam

ಬೆಂಗಳೂರು: ರಾಜ್ಯದ ಪ್ರೌಢಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯಮಟ್ಟದ ಮೊದಲನೇ ಸಂಕಲನಾತ್ಮಕ ಮೌಲ್ಯಮಾಪನ (SA-1) ಅರ್ಧವಾರ್ಷಿಕ ಪರೀಕ್ಷೆಯು ಸೆಪ್ಟೆಂಬರ್ 23 ರಿಂದ 30 ರವರೆಗೆ ನಡೆಯಲಿದ್ದು, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಿದ್ದು, ಆಯುಕ್ತರ ಕಚೇರಿಯ ಮೇಲ್ವಿಚಾರಣೆಯಲ್ಲಿ ಪರೀಕ್ಷಾ ದಿನದಂದು ಪ್ರೌಢಶಾಲಾ ಮುಖ್ಯ ಶಿಕ್ಷಕರ ಶಾಲಾ ಲಾಗಿನ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಡೌನ್‌ಲೋಡ್ ಮಾಡಿದ ಪ್ರಶ್ನೆಪತ್ರಿಕೆಯ ಮೇಲೆ ಸಂಬಂಧಿಸಿದ ಶಾಲಾ ಸಂಕೇತವು ವಾಟರ್‌ಮಾರ್ಕ್ ಆಗಿ ಮೂಡಿಬರಲಿದೆ.

ಪರೀಕ್ಷಾ ವೇಳಾಪಟ್ಟಿ ವಿವರ

  • 23/09/2026 (ಬುಧವಾರ): ಪ್ರಥಮ ಭಾಷೆ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45)

  • 24/09/2026 (ಗುರುವಾರ): ವಿಜ್ಞಾನ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45)

  • 25/09/2026 (ಶುಕ್ರವಾರ): ತೃತೀಯ ಭಾಷೆ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30)

  • 26/09/2026 (ಶನಿವಾರ): ಸಮಾಜ ವಿಜ್ಞಾನ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45)

  • 28/09/2026 (ಸೋಮವಾರ): ಗಣಿತ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45)

  • 29/09/2026 (ಮಂಗಳವಾರ): ದ್ವಿತೀಯ ಭಾಷೆ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30)

  • 30/09/2026 (ಬುಧವಾರ): ದೈಹಿಕ ಶಿಕ್ಷಣ / ವೃತ್ತಿ ಶಿಕ್ಷಣ / ಮೌಲ್ಯ ಶಿಕ್ಷಣ (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45)

ಪರೀಕ್ಷಾ ದಿನದ ಪ್ರಕ್ರಿಯೆಗಳ ಸಮಯ ನಿಗದಿ

ಪರೀಕ್ಷಾ ದಿನಗಳಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಬೆಳಿಗ್ಗೆ 9.15ಕ್ಕೆ ಆರಂಭವಾಗಲಿದ್ದು, ಯಾವುದೇ ವಿದ್ಯಾರ್ಥಿ ಗೈರಾಗದಂತೆ ಕ್ರಮವಹಿಸಬೇಕಿದೆ.

  • ಬೆಳಿಗ್ಗೆ 9.30ಕ್ಕೆ ಮುಖ್ಯ ಶಿಕ್ಷಕರ ಶಾಲಾ ಲಾಗಿನ್‌ನಿಂದ ಪ್ರಶ್ನೆಪತ್ರಿಕೆ ಡೌನ್‌ಲೋಡ್ ಮಾಡಿಕೊಳ್ಳುವುದು.

  • ಬೆಳಿಗ್ಗೆ 9.45 ರಿಂದ 10.00 ಗಂಟೆಯೊಳಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮುದ್ರಣ ಮಾಡುವುದು.

  • ಬೆಳಿಗ್ಗೆ 10.15ಕ್ಕೆ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳ ಪ್ಯಾಕೆಟ್ ನೀಡುವುದು.

  • ಬೆಳಿಗ್ಗೆ 10.30 ರಿಂದ ಪರೀಕ್ಷೆ ಆರಂಭವಾಗಲಿದೆ.

ಮುಖ್ಯ ಶಿಕ್ಷಕರು ತಮ್ಮ ಸ್ವಂತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ (OTP) ನಮೂದಿಸಿ ಸ್ವತಃ ಪ್ರಶ್ನೆಪತ್ರಿಕೆ ಡೌನ್‌ಲೋಡ್ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಲಾಗಿನ್ ಮತ್ತು ಒಟಿಪಿಯನ್ನು ಇತರರೊಂದಿಗೆ ಹಂಚಿಕೊಳ್ಳಬಾರದು ಹಾಗೂ ನೋಡಲ್ ಶಿಕ್ಷಕರು ಈ ಕಾರ್ಯ ನಿರ್ವಹಿಸುವಂತಿಲ್ಲ. ಪ್ರಶ್ನೆಪತ್ರಿಕೆ ಮುದ್ರಣ, ಪ್ಯಾಕಿಂಗ್ ಮತ್ತು ವಿತರಣೆ ವೇಳೆ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಡಯಟ್ ಪ್ರಾಂಶುಪಾಲರಿಗೆ ಮೇಲ್ವಿಚಾರಣೆ ಹೊಣೆ

ಆಯುಕ್ತಾಲಯ ಮಟ್ಟದಲ್ಲಿ ನಿರ್ದೇಶಕರು (ಪ್ರೌಢ ಶಿಕ್ಷಣ) ಅವರನ್ನು ಪರೀಕ್ಷಾ ಮೇಲ್ವಿಚಾರಣೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಆಯಾ ಜಿಲ್ಲೆಯ ಡಯಟ್ ಪ್ರಾಂಶುಪಾಲರು ಹಾಗೂ ಹಿರಿಯ/ಕಿರಿಯ ಉಪನ್ಯಾಸಕರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಲಿದ್ದಾರೆ.

ಅವ್ಯವಹಾರ ನಡೆದರೆ ಕ್ರಿಮಿನಲ್ ಕೇಸ್, ಶಾಲೆ ಮಾನ್ಯತೆ ರದ್ದು

ಪರೀಕ್ಷಾ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆ, ನಕಲು ಮಾಡುವುದು, ಪತ್ರಿಕೆಯ ಫೋಟೋ ತೆಗೆದು ವಾಟ್ಸಾಪ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು, ಚೀಟಿ ಸರಬರಾಜು ಮಾಡುವುದು ಮುಂತಾದ ಕೃತ್ಯಗಳಲ್ಲಿ ಭಾಗಿಯಾದರೆ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಕಾಯ್ದೆ 2023, ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆಗಳಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ನೌಕರರ ವಿರುದ್ಧ ಕೆಸಿಎಸ್ (ಸಿಸಿಎ) ನಿಯಮಾವಳಿಗಳಡಿ ಶಿಸ್ತುಕ್ರಮ ಜರುಗಿಸಲಾಗುವುದು.

ಅನುದಾನಿತ ಶಾಲೆಗಳು ಗೌಪ್ಯತೆ ಕಾಪಾಡದಿದ್ದರೆ ಮಾನ್ಯತೆ ರದ್ದುಪಡಿಸಿ, ಸರ್ಕಾರದ ಅನುದಾನ ಹಿಂಪಡೆಯಲಾಗುವುದು. ಅನುದಾನ ರಹಿತ (ಖಾಸಗಿ) ಶಾಲೆಗಳು ನಿಯಮ ಉಲ್ಲಂಘಿಸಿದರೆ ಅಂತಹ ಶಾಲೆಗಳ ಮಾನ್ಯತೆಯನ್ನು ಶಾಶ್ವತವಾಗಿ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1789659723_2_318.webp

 

news_1789659723_1_480.webp

 

news_1789659722_0_434.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ 'ಮಂಗಳೂರು ಜಿಲ್ಲೆ': ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರBIG BREAKING: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆKPSC ನೇಮಕಾತಿ ಅಕ್ರಮದ ಜಾಲ ಭೇದಿಸಿದ CID: 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ಸೀಜ್!BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಕ್ರಾಸ್ ಎಕ್ಸಾಮಿನೇಷನ್ ವೇಳೆ, ಖುದ್ದು ಹಾಜರಾತಿಗೆ ಅನುಮತಿ ನೀಡಿದ ಹೈಕೋರ್ಟ್ತೆರವುಗೊಳಿಸಿದ್ದ ಫುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ್ರೆ FIR, ಸಾಮಗ್ರಿ ಜಪ್ತಿ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆಕರ್ನಾಟಕ 'SSLC ಅರ್ಧವಾರ್ಷಿಕ ಪರೀಕ್ಷೆ'ಯ ವೇಳಾಪಟ್ಟಿ ಪ್ರಕಟ | Karnataka SSLC Examಮಂಗಳೂರಿನಲ್ಲಿಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿ ಜನರ ಚಿತ್ತ ಸರ್ಕಾರದ ನಿರ್ಧಾರಗಳತ್ತಬರಪೀಡಿತ ತಾಲೂಕುಗಳ ರೈತರಿಗೆ ಬಿಗ್ ರಿಲೀಫ್: ಸಾಲ ಮರುಪಾವತಿಗೆ 12 ತಿಂಗಳ ಕಾಲಾವಕಾಶಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಿಎಂ ಡಿಕೆಶಿ ಹೊಸ ಮಿಷನ್ : 50,000 ನಿವೇಶನ, ಕಲಬುರಗಿಯಲ್ಲಿ ಐಇ ಪಾರ್ಕ್.!