LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 8000 ಪೊಲೀಸರ ನೇಮಕಾತಿ

ಕಲಬುರಗಿ: ಶೀಘ್ರವೇ 8000 ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕಲಬುರಗಿ ಹೊರವಲಯದ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಮಧುಕರ ಶೆಟ್ಟಿ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ 13ನೇ ಹಂತದ ಪಿಎಸ್ಐ(ಸಿವಿಲ್), 12ನೇ ಹಂತದ ಆರ್.ಎಸ್.ಐ., ಸ್ಪೆಷಲ್ ಆರ್.ಎಸ್.ಐ. ಮತ್ತು ಆರನೇ ಹಂತದ ಪಿಎಸ್ಐ(ಕೆ.ಎಸ್.ಐ.ಎಸ್.ಎಫ್.) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ವಿವಿಧ ತುಕಡಿಗಳನ್ನು ವೀಕ್ಷಿಸಿ ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಹಂಚಿಕೆ ಪ್ರಮಾಣ ಸಮಸ್ಯೆ ನಿವಾರಣೆಯಾಗಿದೆ. 8000 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನೇಮಕಾತಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸಿಕ್ಕಿರುವ ಅವಕಾಶವನ್ನು ನೊಂದವರ ಕಣ್ಣೀರು ಒರೆಸಲು, ಸಮಸ್ಯೆ ಪರಿಹರಿಸಲು ಬಳಸಿಕೊಳ್ಳಬೇಕು. ತುಳಿತಕ್ಕೆ ಒಳಗಾದ ಬಡವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರನ್ನು ಮುಖ್ಯ ವಾಹಿನಿಗೆ ತರಲು ನೆರವಾಗುವ ಮೂಲಕ ಪೊಲೀಸರು ಸೇವಾ ಧರ್ಮ ಪಾಲಿಸಬೇಕು ಎಂದು ಕರೆ ನೀಡಿದ್ದಾರೆ.

ನೊಂದವರಿಗೆ ನ್ಯಾಯ ಒದಗಿಸುವಲ್ಲಿ ಕರ್ನಾಟಕ ಪೊಲೀಸ್ ಮೊದಲನೇ ಸ್ಥಾನದಲ್ಲಿದೆ ಎಂದು ಕಳೆದ ವರ್ಷ ಇಂಡಿಯಾ ಜಸ್ಟಿಸ್ ಎಂಬ ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ಇಡೀ ದೇಶದಲ್ಲಿಯೇ ಮೂರನೆಯ ಮಾದರಿ ಠಾಣೆ ಎಂದು ಗುರುತಿಸಲಾಗಿದ್ದು, ಇಂತಹ ಪೊಲೀಸ್ ಠಾಣೆಗಳು ರಾಜ್ಯದಲ್ಲಿ ಹೆಚ್ಚಾಗಲಿ ಎಂದು ಪರಮೇಶ್ವರ್ ಆಶಿಸಿದ್ದಾರೆ .

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ತರಬೇತಿ ವಿಭಾಗದ ಎಡಿಜಿಪಿ ದೇವಜ್ಯೋತಿ ರೇ, ಪೊಲೀಸ್ ತರಬೇತಿ ಮಹಾವಿದ್ಯಾಲಯದ ನಿರ್ದೇಶಕ ಎಂ. ಪುಟ್ಟಮಾದಯ್ಯ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ