LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳು ನಟ ವಿಜಯ್-ಸಂಗೀತಾ ವಿಚ್ಛೇದನ ಕೇಸ್: ವಿಚಾರಣೆ ಜೂನ್ 15ಕ್ಕೆ ವಿಚಾರಣೆ ಮುಂದೂಡಿಕೆ

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ತಮಿಖು ನಟ ದಳಪತಿ ವಿಜಯ್ ಹಾಗೂ ಪತ್ನಿ ಸಂಗೀತಾ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ವಿಚಾರಣೆಯನ್ನು ಎರಡನೇ ಬಾರಿಗೆ ಮುಂದೂಡಿದೆ.

ವಿಜಯ್ ಮತ್ತು ಸಂಗೀತಾ ಅವರ ವಿಚ್ಛೇದನ ಪ್ರಕರಣದ ವಿಚಾರಣೆ ಇಂದು ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ ಬಂದಿತ್ತು. ಅಲ್ಪ ಸಮಯದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಕರಣವನ್ನು ಜೂನ್ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ 26ರಂದು ಸಂಗೀತಾ ಅವರು ವಿಚ್ಛೇದನ ಕೋರಿ ಮೊದಲ ಬಾರಿ ಅರ್ಜಿ ಸಲ್ಲಿಸಿದ್ದರು. ಆನಂತರ ಪ್ರಕರಣವನ್ನು ಏಪ್ರಿಲ್ 20ಕ್ಕೆ ನಿಗದಿಪಡಿಸಲಾಗಿತ್ತು. ಈಗ ಎರಡನೇ ಬಾರಿ ಮುಂದೂಡಲ್ಪಟ್ಟಿದೆ.

ಸಂಗೀತಾ ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ನಟ ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಜಯ್ ಅವರು ಬೇರೊಬ್ಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ. 2021ರಲ್ಲಿ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಸಂಬಂಧವಿರುವುದು ನನಗೆ ತಿಳಿಯಿತು. ಈ ನಂಬಿಕೆ ದ್ರೋಹದಿಂದ ನನಗೆ ತೀವ್ರ ಮಾನಸಿಕ ನೋವು ಉಂಟಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 2021ರಿಂದ ವಿಜಯ್ ತಮ್ಮೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ ಮತ್ತು ಭಾವನಾತ್ಮಕವಾಗಿ ದೂರವಾಗಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ವಿಜಯ್ ಮತ್ತು ಸಂಗೀತಾ 1999ರ ಆಗಸ್ಟ್ ತಿಂಗಳಲ್ಲಿ ವಿವಾಹವಾಗಿದ್ದರು. ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಕಳೆದ 25 ವರ್ಷಗಳಿಂದ ಅನ್ಯೋನ್ಯವಾಗಿದ್ದ ಈ ಜೋಡಿ ಈಗ ಬೇರ್ಪಡುತ್ತಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ