ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಐತಿಹಾಸಿಕ ಮಹಾ ಮೈತ್ರಿಗೆ ನಾಂದಿ ಹಾಡಲಾಗಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷರಾದ ನಟ ಸಿ. ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ಅಧಿಕೃತ ಬೆಂಬಲವನ್ನು ಕೋರಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕಾಂಗ್ರೆಸ್, ವಿಜಯ್ ನೇತೃತ್ವದ ಟಿವಿಎಕ್ ಸರ್ಕಾರಕ್ಕೆ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ.
ತಮಿಳುನಾಡಿನ ಜನತೆ, ವಿಶೇಷವಾಗಿ ಯುವಸಮುದಾಯವು ಸಾಂವಿಧಾನಿಕ ತತ್ವಗಳನ್ನು ನಂಬುವ ಜಾತ್ಯತೀತ, ಪ್ರಗತಿಪರ ಮತ್ತು ಕಲ್ಯಾಣ ಆಧಾರಿತ ಸರ್ಕಾರಕ್ಕಾಗಿ ಸ್ಪಷ್ಟ ಮತ್ತು ಅಗಾಧವಾದ ತೀರ್ಪನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನಾದೇಶವನ್ನು ಗೌರವಿಸಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಟಿವಿಎಕ್ ಜೊತೆ ಕೈಜೋಡಿಸಲು ನಿರ್ಧರಿಸಿದೆ.
ವಿಜಯ್ ಪಕ್ಷಕ್ಕೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ
ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಟಿವಿಕೆ ಅಧ್ಯಕ್ಷ ಸಿ. ವಿಜಯ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷಕ್ಕೆ ಅಧಿಕೃತವಾಗಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ಕಾಂಗ್ರೆಸ್, ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ತನ್ನ ಪೂರ್ಣ ಬೆಂಬಲವನ್ನು ಪ್ರಕಟಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ತಮಿಳುನಾಡಿನ ಜನತೆ, ವಿಶೇಷವಾಗಿ ಯುವಸಮುದಾಯವು ಸಾಂವಿಧಾನಿಕ ತತ್ವಗಳನ್ನು ನಂಬುವ, ಜಾತ್ಯತೀತ, ಪ್ರಗತಿಪರ ಹಾಗೂ ಕಲ್ಯಾಣ ಆಧಾರಿತ ಸರ್ಕಾರಕ್ಕಾಗಿ ಸ್ಪಷ್ಟ ಮತ್ತು ಬಲವಾದ ತೀರ್ಪನ್ನು ನೀಡಿದ್ದಾರೆ. ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಜನತೆ ಸಿ. ವಿಜಯ್ ನೇತೃತ್ವದ ಟಿವಿಕೆ ಪಕ್ಷವನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವು (CLP) ಟಿವಿಕೆಗೆ ಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ ಎಂದು ತಿಳಿಸಿದೆ.
ಸ್ಥಳೀಯ ಸಂಸ್ಥೆ, ಲೋಕಸಭೆಗೂ ಮುಂದುವರಿಯಲಿದೆ ಮೈತ್ರಿ
ಕಾಂಗ್ರೆಸ್ ಮತ್ತು ಟಿವಿಕೆ ನಡುವಿನ ಈ ಒಪ್ಪಂದ ಕೇವಲ ಈಗಿನ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗಿಲ್ಲ. ಮುಂಬರುವ ದಿನಗಳಲ್ಲಿ ತಮಿಳುನಾಡು ರಾಜಕಾರಣವನ್ನು ಸಂಪೂರ್ಣವಾಗಿ ಮರುರೂಪಿಸುವ ದೀರ್ಘಾವಧಿ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆ.
ಪರಸ್ಪರ ಗೌರವ, ಸೂಕ್ತ ಪಾಲುದಾರಿಕೆ ಮತ್ತು ಜಂಟಿ ಜವಾಬ್ದಾರಿಯ ಆಧಾರದ ಮೇಲೆ ಈ ಮೈತ್ರಿ ಏರ್ಪಟ್ಟಿದೆ. ಇದು ಕೇವಲ ಪ್ರಸ್ತುತ ಸರ್ಕಾರ ರಚನೆಗಾಗಿ ಮಾತ್ರವಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು, ಲೋಕಸಭೆ ಹಾಗೂ ರಾಜ್ಯಸಭಾ ಚುನಾವಣೆಗಳಿಗೂ ಮುಂದುವರಿಯಲಿದೆ” ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ಇಟ್ಟ ಪ್ರಮುಖ ಷರತ್ತು ಏನು?
ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್ ಅತ್ಯಂತ ಕಠಿಣ ಹಾಗೂ ಪ್ರಮುಖ ಷರತ್ತೊಂದನ್ನು ವಿಧಿಸಿದೆ. ಭಾರತದ ಸಂವಿಧಾನವನ್ನು ನಂಬದ ಯಾವುದೇ ಕೋಮು ಶಕ್ತಿಗಳನ್ನು (Communal Forces) ಈ ಮೈತ್ರಿಯಿಂದ ಸಂಪೂರ್ಣವಾಗಿ ದೂರ ಇಡಬೇಕು ಎಂಬುದು ಕಾಂಗ್ರೆಸ್ನ ಮುಖ್ಯ ಷರತ್ತಾಗಿದೆ.
ಒಟ್ಟಾರೆಯಾಗಿ, ಡಿಎಂಕೆ ಪಾಳಯದಿಂದ ಕಾಂಗ್ರೆಸ್ ಹೊರಬಂದು, ನಟ ವಿಜಯ್ ಅವರ ಕೈ ಹಿಡಿದಿರುವುದು ತಮಿಳುನಾಡು ರಾಜಕೀಯದಲ್ಲಿ ಹೊಸ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದೆ.