LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

UGCET-2026 : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : KEA ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) UGCET-2026ರ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶನಿವಾರದಿಂದ ಅಭ್ಯರ್ಥಿಗಳಿಗೆ ಆಪ್ಷನ್ ಎಂಟ್ರಿ (ಆಯ್ಕೆ ದಾಖಲಾತಿ) ಮಾಡಲು ಅವಕಾಶ ನೀಡಲಾಗಿದ್ದು, ಜೂನ್ 30ರವರೆಗೆ ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಕಾಲೇಜು ಹಾಗೂ ಕೋರ್ಸ್‌ಗಳನ್ನು ಆಯ್ಕೆ ಮಾಡಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ಅವರು ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, UGCET-2026 ಅಭ್ಯರ್ಥಿಗಳಿಗೆ ಜೂನ್ 20ರಿಂದ ಆಪ್ಷನ್ ಎಂಟ್ರಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ಜೂನ್ 30ರವರೆಗೆ ತಮ್ಮ ಆದ್ಯತೆಯ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆಯನ್ನು ದಾಖಲಿಸಬಹುದು.ಆಪ್ಷನ್ ಎಂಟ್ರಿ ಪೂರ್ಣಗೊಂಡ ಬಳಿಕ ಜುಲೈ 6ರಂದು ಅಣಕು (Mock) ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. ಈ ಫಲಿತಾಂಶದ ಆಧಾರದ ಮೇಲೆ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಮರುಪರಿಶೀಲಿಸಿ, ಸೇರಿಸುವುದು, ಅಳಿಸುವುದು ಅಥವಾ ಬದಲಾಯಿಸುವುದಕ್ಕೆ ಜುಲೈ 6ರಿಂದ 9ರವರೆಗೆ ಅವಕಾಶ ನೀಡಲಾಗಿದೆ.

ಅಂತಿಮವಾಗಿ ಜುಲೈ 15ರಂದು ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದ್ದು, ಅಭ್ಯರ್ಥಿಗಳು ತಮಗೆ ದೊರೆತ ಸೀಟಿನ ವಿವರಗಳನ್ನು KEA ಪೋರ್ಟಲ್‌ನಲ್ಲಿ ಪರಿಶೀಲಿಸಬಹುದು.ಇದೇ ವೇಳೆ, NEET ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಜೂನ್ 22ರ ನಂತರ ಆಪ್ಷನ್ ಎಂಟ್ರಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು KEA ಸ್ಪಷ್ಟಪಡಿಸಿದೆ.

UGCET-2026 ಕೌನ್ಸೆಲಿಂಗ್ ಪ್ರಕ್ರಿಯೆಯ ಪ್ರಮುಖ ಹಂತ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ಕಾಲೇಜು ಹಾಗೂ ಕೋರ್ಸ್ ಆಯ್ಕೆಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು. ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಸಮರ್ಪಕವಾಗಿ ಬಳಸಿಕೊಂಡು ಆಯ್ಕೆಗಳಲ್ಲಿ ಸೂಕ್ತ ಬದಲಾವಣೆ ಮಾಡಿದರೆ ಉತ್ತಮ ಕಾಲೇಜಿನಲ್ಲಿ ಸೀಟು ಪಡೆಯುವ ಅವಕಾಶ ಹೆಚ್ಚಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ