LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Viral News : ಮದುವೆ ಸೀರೆ ಇಷ್ಟವಾಗದಿದ್ದಕ್ಕೆ ಮದುವೆಯೇ ಕ್ಯಾನ್ಸಲ್ ! ಆಮೇಲೆ ನಡೆದಿದ್ದೇನು?

ಕೇವಲ ಒಂದು ಸೀರೆಯ ವಿಚಾರದಲ್ಲಿ ಉಂಟಾದ ವಿವಾದವು ಮದುವೆಯನ್ನು ನಿಲ್ಲಿಸುವುದು ಮಾತ್ರವಲ್ಲದೆ, ಎರಡು ಕುಟುಂಬಗಳ ನಡುವೆ ಹಿಂಸಾತ್ಮಕ ಘರ್ಷಣೆಗೂ ಕಾರಣವಾದ ವಿಚಿತ್ರ ಘಟನೆಯೊಂದು ನಡೆದಿದೆ.

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ.

ಏನಿದು ಘಟನೆ? ರೇವತಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯ್‌ಘಾಟ್ ಗ್ರಾಮದ ಪಂಚರುಖಿ ಅಮ್ಮನವರ ದೇವಸ್ಥಾನದಲ್ಲಿ ಈ ತಿಂಗಳ 11 ರಂದು ವಿಶಾಲ್ ಗೊಂಡ್ ಮತ್ತು ನಿಕಿ ಅವರ ವಿವಾಹ ನಡೆಯಬೇಕಿತ್ತು. ವರನ ಕಡೆಯವರು ಮೆರವಣಿಗೆಯೊಂದಿಗೆ (ಬಾರಾತ್) ಅದ್ಧೂರಿಯಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಮದುವೆಯ ವಿಧಿವಿಧಾನಗಳು ಆರಂಭವಾಗುವ ಸಮಯದಲ್ಲಿ, ವರನ ಕುಟುಂಬದವರು ವಧುವಿಗೆ ಮದುವೆಯ ಸೀರೆಯನ್ನು ಉಡುಗೊರೆಯಾಗಿ ನೀಡಿದರು.

ಆದರೆ, ಆ ಸೀರೆ ತನಗೆ ಸ್ವಲ್ಪವೂ ಇಷ್ಟವಾಗಿಲ್ಲ ಮತ್ತು ಅದು ತನಗೆ ಒಪ್ಪುತ್ತಿಲ್ಲ ಎಂದು ಹೇಳಿದ ವಧು ನಿಕಿ, ಮದುವೆಯಾಗಲು ನಿರಾಕರಿಸಿದ್ದಾಳೆ.

ಘರ್ಷಣೆ ಮತ್ತು ಪೊಲೀಸ್ ಕೇಸ್: ವಧು ಹಠ ಹಿಡಿದಿದ್ದರಿಂದ ಉಭಯ ಪಂಗಡಗಳ ನಡುವೆ ಮಾತಿನ ಚಕಮಕಿ ನಡೆದು, ಅದು ದೊಡ್ಡ ಮಟ್ಟದ ಗಲಾಟೆಗೆ ಕಾರಣವಾಯಿತು. ಈ ಘರ್ಷಣೆಯಲ್ಲಿ ವರನ ತಾಯಿ, ಸಹೋದರ ಸೇರಿದಂತೆ ಮತ್ತೊಬ್ಬ ಮಹಿಳೆಗೆ ಗಾಯಗಳಾಗಿವೆ. ವಿಷಯ ತಿಳಿದ ಡಿಎಸ್ಪಿ ಮೊಹಮ್ಮದ್ ಫಹೀಮ್ ಖುರೇಷಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ವಧುವಿನ ತಂದೆ ನೀಡಿದ ದೂರಿನ ಮೇರೆಗೆ ವರ ವಿಶಾಲ್ ಮತ್ತು ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಿಂದ ಮದುವೆ ಅರ್ಧಕ್ಕೆ ನಿಂತುಹೋಗಿದ್ದು, ವರನ ಕಡೆಯವರು ಮದುವೆ ಮೆರವಣಿಗೆಯೊಂದಿಗೆ ಬರಿಗೈಲಿ ವಾಪಸ್ ಹೋಗಬೇಕಾಯಿತು. ಪ್ರಸ್ತುತ ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್