
ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿಗಳು ರಾಜ್ಯದಲ್ಲಿರುವ ಜನರಿಗೆ ಇದರಿಂದ ಉಪಯೋಗವಾಗಿದೆ ಅದರಲ್ಲೂ ಸಹ ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರಿಗೆ ಇದು ಅತ್ಯಂತ ಉಪಯೋಗಕರವಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು
ಇನ್ನು ಶಕ್ತಿ ಯೋಜನೆ ಅಡಿಯಲ್ಲಿ 46 ಕೋಟಿ ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಂದು ಸಾವಿರ ಕೋಟಿ ರೂ. ಟಿಕೆಟ್ ದುಡ್ಡು ಆಗಿದೆ ಎಂದು ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಹೆಚ್ಚು ಮಹಿಳೆಯರೇ ಪ್ರಯಾಣ ಮಾಡಿದ್ದರಿಂದ ಸ್ವಲ್ಪ ಸಮಸ್ಯೆ ಆಗಿತ್ತು. ಬಳಿಕ ಅಧಿಕಾರಿಗಳು ಹೆಚ್ಚಿನ ಶೆಡ್ಯೂಲ್ ಮಾಡಿ ಸಾಕಷ್ಟು ಸುಧಾರಣೆ ಆಗಿದೆ. ರಾಜ್ಯದಲ್ಲಿ ನಾಲ್ಕು ವಿಭಾಗಗಳು ಸೇರಿ ಪ್ರತಿದಿನ 1.54 ಲಕ್ಷ ಟ್ರಿಪ್ ಇರುತ್ತೆ. ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.