Education News

ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶೋಭಾ ಕರಂದ್ಲಾಜೆ

ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶೋಭಾ ಕರಂದ್ಲಾಜೆ

ಬೆಂಗಳೂರು: ಇಸ್ರೋ ಸಂಸ್ಥೆಯ ಚಂದ್ರಯಾನ 3 ಯಶಸ್ವಿ ಗೊಂಡಿರುವುದರಿಂದ ಭಾರತದ ಪ್ರಧಾನಿ ಆಗಿರುವಂತ ನರೇಂದ್ರ ಮೋದಿ ಅವರು ನಾಳೆ ಶನಿವಾರ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ

ಪ್ರಧಾನಿ ಮೋದಿ ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಕರ್ನಾಟಕ ಬಿಜೆಪಿ ನಾಯಕರು ಏರ್ಪಾಡುಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಹ ಕಾರ್ಯಕ್ರಮ ರೂಪುರೇಷೆ ಬಗ್ಗೆ ಪರಾಮರ್ಷೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೀತಿಲ್ಲ. ಈಶಾನ್ಯ ರಾಜ್ಯದವರು ಬೆಂಗಳೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದು, ಅದರ ನಿಯೋಗ ನಮ್ಮ ಬಳಿ ಬಂದಿತ್ತು. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದೆಯಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ. ಬಿಬಿಎಂಪಿಯವರು ಮಾಸಿಕ 15,000 ರೂ. ಕೇಳುತ್ತಿದ್ದಾರೆಂದು ಮಾಲೀಕರ ನಿಯೋಗದವರು ತಿಳಿಸಿದ್ದಾರೆ. ಇದೇ ರೀತಿ ವಸೂಲಿಗೆ ಇಳಿದರೆ ಅವರೆಲ್ಲರೂ ಬೆಂಗಳೂರು ಬಿಡುತ್ತಾರೆ. ರಾಜ್ಯದಲ್ಲಿ ಯಾವ ಅಧಿಕಾರಿಗಳೂ ಸಮಾಧಾನದಿಂದಿಲ್ಲ, ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ. IAS, IPS ಅಧಿಕಾರಿಗಳಿಗೂ ಸ್ಥಳ ತೋರಿಸದೆ ವರ್ಗಾವಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂತಹ ಪರಿಸ್ಥಿತಿಯಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.

Disclaimer: This Story is auto-aggregated by a Syndicated Feed and has not been Created or Edited By City Big News Staff.