
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಕೂಗು ಜೋರಾಗಿ ಕೇಳುತ್ತಿದ್ದು, ಇದರ ಬೆನ್ನೆಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾರೋ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ಕೆಲವೊಂದಿಷ್ಟು ಹಣ ಬಿಡುಗಡೆ ಕೂಡ ಆಗಿದೆ 7 ತಿಂಗಳ ಕಾಮಗಾರಿಯ ಬಾಕಿ ಹಣ ಬರಬೇಕು. ಬಾಕಿ ಬಿಲ್ ಪಾವತಿಗೆ ಈಗಾಗಲೇ ಸಿಎಂ ಬಳಿ ನಾವು ಮನವಿ ಮಾಡಿದ್ದೇವೆ.
ನಮಗೆ ಯಾವ ಸಚಿವರು ಕಮಿಷನ್ ಕೇಳಿಲ್ಲ. ಕಮಿಷನ್ ಕೇಳಿದ್ದಾರೆ ಎಂದು ಗುತ್ತಿಗೆದಾರರು ನನ್ನ ಬಳಿ ಹೇಳಿಲ್ಲ ಎಂದರು. ಈ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆರೋಪಿಸುತ್ತಿರುವ ಕಮಿಷನ್ ಆರೋಪಕ್ಕೆ ಕೆಂಪಣ್ಣ ಅವರು ತೆರೆ ಎಳೆದಿದ್ದಾರೆ.
ಇಂದು ಸುದ್ದಿಗರರೊಂದಿಗೆ ಮಾತನಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಈಗಾಗಲೇ 7 ತಿಂಗಳಿಂದ ಬಾಕಿ ಬರಬೇಕು. ಈಗಾಗಲೇ ಕೆಲವಷ್ಟು ಹಣ ಬಿಡುಗಡೆ ಆಗಿದೆ. 100 ಕೋಟಿ ರೂ. ಸಾಲಲ್ಲ. ಸಿಎಂ ಬಳಿ ಮನವಿ ಮಾಡಿದ್ದೇವೆ. ಅವರು ಎಷ್ಟು ತಿಂಗಳು ಅಂತ ಕೇಳಿದ್ರು. ಅದಕ್ಕೆ ಮೂರು ವರ್ಷದಿಂದ ಅಂತ ಹೇಳಿದ್ದೇವೆ. ಅದಕ್ಕೆ ಅವರು ನಾನು ಬಂದು ಮೂರು ತಿಂಗಳಾಗಿದೆ. ನಮ್ಮ ಕುತ್ತಿಗೆ ಮೇಲೆ ಕೂತಿದ್ದೀರಿ ಅಂದ್ರು. ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಅಂತ ಹೇಳಿದ್ದೇವೆ. ಯಾವ ಸಚಿವರು ಕಮಿಷನ್ ಕೇಳಿಲ್ಲ. ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ. ಯಾರೋ ಮೂರನೇ ವ್ಯಕ್ತಿ ಹೇಳುತ್ತಿರುವುದು ಸಂಬಂಧವಿಲ್ಲ ಎಂದು ಹೇಳಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.